ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ಜರುಗಿದೆ.
ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ.
ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ.
ನಾನು ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್ ನಲ್ಲಿ ವಿವರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ