ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ಜರುಗಿದೆ.
ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ.
ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ.
ನಾನು ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್ ನಲ್ಲಿ ವಿವರಿಸಿದ್ದಾರೆ.
- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
- ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
- ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
- ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
- ರೋಹಿಣಿಗೆ ಮತ್ತೆ ಸಂಕಷ್ಟ – ಮೈಸೂರು ಡಿಸಿ ಆಗಿದ್ದ ವೇಳೆ ಮಾಡಿದ್ದ ಅಕ್ರಮ ಆರೋಪ ತನಿಖೆಗೆ ಆದೇಶ
More Stories
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!
ಕಾಶ್ಮೀರ ತೊರೆಯಿರಿ – ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಬೆದರಿಕೆ
ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮನೆ ಸೇರಿ 7 ಕಡೆ CBI ದಾಳಿ