ಪದ್ಮಶ್ರೀ ಪುರಸ್ಕೃತ, ಆಧುನಿಕ ಸೂಫಿಸಂತ ಇಬ್ರಾಹಿಂ ಎನ್.ಸುತಾರ್ (82) ಶನಿವಾರ ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಅಸ್ಪತ್ರೆಯಲ್ಲಿ ನಿಧನರಾದರು.
ಇಬ್ರಾಹಿಂ ಎನ್. ಸುತಾರ್ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ನಿವಾಸಿ.ಮೇ 10, 1940 ರಲ್ಲಿ ಜನಿಸಿದ್ದ ಇಬ್ರಾಹಿಂ ನಬೀ ಸಾಹೇಬ್ ಸುತಾರ್, ವೈದಿಕ, ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳಲ್ಲಿ ಜನಪ್ರಿಯತೆ ಗಳಿಸಿದ್ದರು.
ಕನ್ನಡದ ಕಬೀರ ಎಂದೇ ಇವರು ಖ್ಯಾತರಾಗಿದ್ದ ಕಾರಣಕ್ಕೆ ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. 1995ರಲ್ಲಿ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿತ್ತು.
ತಂದೆ ಮಹಾಲಿಂಗಪುರದ ನಬಿಸಾಹೆಬ್, ತಾಯಿ ಅಮೀನಾಬಿ. ಬಡತನದಿಂದಾಗಿ ಶಿಕ್ಷಣವನ್ನು ಮೂರನೇ ತರಗತಿಯವರೆಗೆ ಮಾತ್ರ ಕಲಿತರು. ನಂತರ ನೇಕಾರಿಕೆ ಕಲಿತು ಬದುಕು ಸಾಗಿಸತೊಡಗಿದ್ದರು.
ಬಾಲ್ಯದಲ್ಲಿ ಮಸೀದಿಯಲ್ಲಿ ನಮಾಜು ಕಲಿತು ಕುರಾನ್ ಅಧ್ಯಯನ ಮಾಡಿದರು. ಬೇರೆ ಧರ್ಮಗಳನ್ನು ತಿಳಿಯಬಯಸಿದರು.
ಊರಿನ ಭಜನಾಸಂಘದಲ್ಲಿ ಪಾಲ್ಗೊಂಡು ತತ್ವಪದ, ವಚನಗಳನ್ನು ಕಲಿತರು. ಪ್ರವಚನಗಳನ್ನು ಕೇಳಿದರು. ನಿಜಗುಣಯೋಗಿಗಳ ಶಾಸ್ತ್ರ, ಭಗವದ್ಗೀತೆಗಳ ಅಧ್ಯಯನ ಮಾಡಿದ್ದರು. ದೇವರು, ಧರ್ಮ ಬೇರೆ ಆದರೂ ಸತ್ಯ ಒಂದೇ ಎಂದು ಅರಿತರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment