Main News

ಪೇಷಾವರದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ: 7 ಸಾವು 123 ಮಂದಿಗೆ ಗಾಯ

ಉತ್ತರ ಪಾಕಿಸ್ತಾನದ ಪೇಷಾವರದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 123 ಗಾಯಗೊಂಡು 7 ಜನರು ಸಾವನ್ನಪ್ಪಿರುವ ಘಟನೆ ಮಂಗಳವಾರ ವರದಿಯಾಗಿದೆ.

ಈ ಧಾರ್ಮಿಕ ಶಾಲೆಯು ಪೇಷಾವರ ನಗರದ ದಕ್ಷಿಣ ಹೊರವಲಯದಲ್ಲಿರುವ ಪೇಶಾವರ ರಿಂಗ್ ರಸ್ತೆಯಲ್ಲಿದ್ದು, ಬೆಳಿಗ್ಗೆ ಮೊದಲ ಉಪನ್ಯಾಸದ ಸಮಯದಲ್ಲಿ ಸ್ಫೋಟ ಸಂಭವಿಸಿದೆ.

ಪೇಶಾರ್ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಅಲಿ ಗಂಡಾಪುರ ಅವರು ‘ಸೆಮಿನರಿ ಜಾಮಿಯಾ ಜುಬೈರಿಯಾ ಮದರಸಾದಲ್ಲಿ, ಬೆಳಿಗ್ಗೆ ಮೊದಲ ಉಪನ್ಯಾಸದ ವೇಳೆ ಧಾರ್ಮಿಕ ಕೇಂದ್ರದಲ್ಲಿ, ಸುಮಾರು 5-6 ಕಿಲೋಗ್ರಾಂಗಳಷ್ಟು ಸ್ಫೋಟಕಗಳನ್ನು ಐಇಡಿ ಬಳಸಿ‌ ಚೀಲವೊಂದರಲ್ಲಿ ಇಡಲಾಗಿತ್ತು. ಈ ಚೀಲವೇ ಸ್ಪೋಟಕ್ಕೆ ಕಾರಣ’ ಎಂದು ಗೊತ್ತಾಗಿದೆ

ಸ್ಪೋಟದ ನಂತರ ಗಾಯಾಳುಗಳನ್ನು ಲೇಡಿ ರೀಡಿಂಗ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವಕ್ತಾರರಾದ ಮೊಹಮ್ಮದ್ ಅಸಿಮ್ ‘ಸುಮಾರು 123 ಜನ ಗಾಯಾಳುಗಳಾಗಿದ್ದಾರೆ ಹಾಗೂ 7 ಜನ ಮೃತರಾಗಿದ್ದಾರೆ. ಮೃತರಲ್ಲಿ ಮಕ್ಕಳೂ ಸೇರಿದ್ದಾರೆ’.

ಘಟನೆಯ ಬಗ್ಗೆ ಟ್ಟೀಟ್ ಮಾಡಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ‘ನಾನು ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ. ಹೇಡಿತನದ ಅನಾಗರಿಕ ದಾಳಿಗೆ ಕಾರಣವಾದ ಭಯೋತ್ಪಾದಕರನ್ನು ನ್ಯಾಯಕ್ಕೆ ಶೀಘ್ರವಾಗಿ ತರಲಾಗುವುದು ಎಂದು ನನ್ನ ರಾಷ್ಟ್ರಕ್ಕೆ ಭರವಸೆ ನೀಡುತ್ತೇನೆ’ ಬರೆದುಕೊಂಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024