ಬೆಂಗಳೂರು : ರಾಜ್ಯ ಸಭೆ ಸದಸ್ಯರಾಗಿ ಆಯ್ಕೆಯಾದ ನಾಸೀರ್ ಹುಸೇನ್ ವಿಜಯೋತ್ಸವದ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.
ಆತ ಯಾರು ಎಂದು ನನಗೆ ತಿಳಿದಿಲ್ಲ ಎಂದು ನಾಸೀರ್ ಹುಸೇನ್ ತಿಳಿಸಿದ್ದಾರೆ. ಘಟನೆ ಬಗ್ಗೆ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು .
ಇದೀಗ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ, ವೀಡಿಯೋ ಪಡೆದು ಎಫ್ಎಸ್ಎಲ್ಗೆ ಕಳುಹಿಸಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.ಅಜಯ್ ನಾಗಭೂಷಣ್ ಈಗ ಕನ್ನಡ- ಸಂಸ್ಕೃತಿ ಇಲಾಖೆ ಕಾರ್ಯದರ್ಶಿ
ಸುದ್ದಿ ಭಿತ್ತರಿಸಿದ ಪ್ರತಿ ಮಾಧ್ಯಮಗಳಿಂದ ವೀಡಿಯೋಗಳನ್ನು ಪಡೆದು ಎಫ್ಎಸ್ಎಲ್ಗೆ ಕಳುಹಿಸಿ ಕೊಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.