ಪಂಜಾಬ್ನಲ್ಲಿ ಫೆಬ್ರವರಿ 14 ರಂದು ನಡೆಯಬೇಕಾಗಿದ್ದ ಚುನಾವಣೆಯನ್ನು ಫೆಬ್ರವರಿ 20ಕ್ಕೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚೆನ್ನಿ ಹಾಗೂ ಬಿಜೆಪಿ, ಕಾಂಗ್ರೆಸ್ ನಾಯಕರು ಮನವಿ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ನಿರ್ಧಾರವನ್ನು ಪ್ರಕಟಿಸಿದೆ.
ಈ ಸಂಬಂಧ ಇಂದು ಮಹತ್ವದ ಸಭೆ ನಡೆಸಿದ ದೆಹಲಿ ಚುನಾವಣಾ ಆಯೋಗ ಫೆಬ್ರವರಿ 14ಕ್ಕೆ ನಡೆಯಬೇಕಾಗಿದ್ದ ಚುನಾವಣೆಯನ್ನು ಫೆಬ್ರವರಿ 20ಕ್ಕೆ ನಡೆಸುವುದಾಗಿ ತಿಳಿಸಿದೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನಡೆಸುವುದಾಗಿ ಆಯೋಗ ಘೋಷಿಸಿತ್ತು.
ಆ ಪ್ರಕಾರ ಎರಡನೇ ಹಂತದ ಮತದಾನದ ಭಾಗವಾಗಿ ಪಂಜಾಬ್ನಲ್ಲಿ ಫೆಬ್ರವರಿ 20ಕ್ಕೆ ಮತದಾನ ನಡೆಯಲಿದೆ.
ಮುಂದಿನ ತಿಂಗಳು ಅಂದರೆ ಫೆಬ್ರವರಿ 14 ರಂದು ಪಂಜಾಬ್ನಲ್ಲಿ ವಿಧಾನಸಭೆ ಎಲೆಕ್ಷನ್ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು.
ಆದರೆ ಇದಕ್ಕೆ ನಕಾರವೆತ್ತಿದ್ದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚೆನ್ನಿ , ಸಂತ ಗುರು ರವಿದಾಸ್ ಜಯಂತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು. ಈ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಹೆಚ್ಚಿನ ದಲಿತ ಬಾಂಧವರು ಕಾಶಿ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ಇರುವುದಿಲ್ಲ. ಹೀಗಾಗಿ ಚುನಾವಣೆಯನ್ನು ಮುಂದೂಡುವುದು ಸೂಕ್ತ ಎಂದು ಮನವಿ ಮಾಡಿದ್ದರು.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment