February 22, 2026

Newsnap Kannada

The World at your finger tips!

rangayana

ಫೆ.21 ರಂದು ಪರ್ವ ವಿರಾಟ್ ದರ್ಶನ ವಿಚಾರ ಸಂಕಿರಣ

Spread the love

ಮೈಸೂರು ರಂಗಾಯಣ ಹಾಗೂ ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಸಹಯೋಗದಲ್ಲಿ ಫೆಬ್ರವರಿ 21 ರಂದು ಭಾನುವಾರ “ಪರ್ವ ವಿರಾಟ್ ದರ್ಶನ” ಹೆಸರಿನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕಲಾಮಂದಿರದಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ವಿಚಾರ ಸಂಕಿರಣವನ್ನು ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಗೌರವ ಕಾರ್ಯದರ್ಶಿ ಜಿ.ಎಲ್.ಶೇಖರ್ ಉದ್ಘಾಟಿಸುವರು ಎಂದರು.

ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಶತಾವಧಾನಿ ಡಾ.ಆರ್.ಗಣೇಶ್ ಅವರು ಉಪನ್ಯಾಸ ನೀಡಲಿದ್ದು, ವಿಚಾರ ಸಂಕಿರಣದಲ್ಲಿ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಪರ್ವ ನಾಟಕ ನಿರ್ದೇಶಕ ಪ್ರಕಾಶ್ ಬೆಳವಾಡಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

error: Content is protected !!