ಗುತ್ತಿಗೆದಾರನಿಂದ 25 ಸಾವಿರ ರು ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯಿತ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರುನಲ್ಲಿ ನಡೆದಿದೆ.
ಎಂ. ಉಷಾ ಬಲೆಗೆ ಬಿದ್ದ ಪಿಡಿಒ. ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಕಾಮಗಾರಿ ಬಿಲ್ ಮಂಜೂರು ಮಾಡಲು 25,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದಾರೆ .
ಉಷಾ ಜೊತೆಗೆ ಬಿಲ್ ಕಲೆಕ್ಟರ್ ಪುಟ್ಟಸ್ವಾಮಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.