ಗ್ರಾಮ ಪಂಚಾಯತಿ ವಾರ್ಡ್ ಸಭೆಯೊಂದು ಪ್ರೇಮಿಗಳಿಬ್ಬರಿಗೆ ಮದುವೆ ಮಂಟಪವಾದ ಘಟನೆಗೆ ಸಾಕ್ಷಿಯಾಗಿದೆ.
ಮೈಸೂರಿನ ನಂಜನಗೂಡು ತಾಲೂಕು ಹರದನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಪ್ರೇಮಿಗಳಿಬ್ಬರನ್ನು ಹರದನಹಳ್ಳಿ ಪಿಡಿಓ ಮಹದೇವಸ್ವಾಮಿ ಒಂದು ಮಾಡಿದ್ದಾರೆ.
ಕುಟುಂಬಗಳ ನಡುವಿನ ಕಲಹದಿಂದ ನೊಂದಿದ್ದ ಪ್ರೇಮಿಗಳಿಬ್ಬರಿಗೆ ಮಹದೇವಸ್ವಾಮಿ ಪರಿಹಾರ ಸೂಚಿಸಿ ಹೊಸ ಬದುಕಿಗೆ ದಾರಿ ತೋರಿಸಿ ಕೊಟ್ಟಿದ್ದಾರೆ.
ಹರದನಹಳ್ಳಿ ಯಲ್ಲಿ ವಾರ್ಡ್ಗಳ ಕುಂದುಕೊರತೆಗಳನ್ನು ಬಗೆಹರಿಸಲು ವಾರ್ಡ್ ಸಭೆಯನ್ನು ಕರೆಯಲಾಗಿತ್ತು. ಆದರೆ, ಈ ಸಭೆ ಪ್ರೇಮಿಗಳ ಪಾಲಿನ ಮದುವೆ ಮಂಟಪವಾಗಿ ಬದಲಾಗಿತ್ತು.
ಕಳೆದೆರಡು ವರ್ಷಗಳಿಂದ ಪ್ರೀತಿಸುತ್ತಿದ್ದರೂ ಕುಟುಂಬಸ್ಥರ ವಿರೋಧದಿಂದ ಪ್ರೇಮಿಗಳು ದೂರಾಗಿದ್ದರು. ಈ ವಿಚಾರ ಕುರಿತು ಸಭೆಯಲ್ಲಿ ಎದ್ದ ಗದ್ದಲ ತಿಳಿದು ಬಂದ ಪಿಡಿಓ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಿದ್ದಾರೆ.
ಸಭೆಯಲ್ಲಿ ಪ್ರೇಮಿಗಳಾದ ಬಸವರಾಜು ಹಾಗೂ ಸುಚಿತ್ರ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಪ್ರೇಮಿಗಳ ಎರಡೂ ಕುಟುಂಬದವರು ಮದುವೆಗೆ ವಿರೋಧಿಸಿದ್ದರು. ಈ ಮಧ್ಯೆ ಗ್ರಾಮದ ಮುಖಂಡರು ದಂಡ ಕಟ್ಟಿಸಿಕೊಂಡು ಮದುವೆ ಮಾಡಿಸಲು ಮುಂದಾಗಿದ್ದರು.
ಆದರೆ ಈ ವಿಷಯ ತಿಳಿದ ಪಿಡಿಓ, ತಿಳಿಹೇಳಿ ವಾರ್ಡ್ ಸದಸ್ಯರ ಸಮ್ಮುಖದಲ್ಲಿ ಹಾರ ಬದಲಿಸುವ ಮೂಲಕ ಮದುವೆ ಮಾಡಿಸಿದ್ದಾರೆ.
ಜೊತೆಗೆ ಪ್ರೇಮಿಗಳ ಪೋಷಕರನ್ನೂ ಸಹ ಮನ ಒಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment