ಉಡುಪಿ: ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಘಟನೆಯ ವಿವರ:
ಜಾಗದ ದಾಖಲೆಗೆ 9/11 ಮಾಡಿಕೊಡಲು ₹22,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಉಮಾಶಂಕರ್ ಮತ್ತು ಎಸ್ಡಿಎ ಶೇಖರ್ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಶಿಕಾಯತ್ ಪ್ರಕಾರ:
ಮೊಹಮ್ಮದ್ ಹನೀಫ್ ಎಂಬವರು ತಮ್ಮ ಜಾಗದ ದಾಖಲಿಗಾಗಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದು, ದಾಖಲೆ ನೀಡಲು ₹22,000 ಲಂಚಕ್ಕೆ ಪಿಡಿಒ ಮತ್ತು ಎಸ್ಡಿಎ ಬೇಡಿಕೆ ಇಟ್ಟಿದ್ದಾರೆ.ಖಾದ್ಯ ತೈಲ ಬೆಲೆಗಳಲ್ಲಿ ಭಾರೀ ಇಳಿಕೆ
ಕಾರ್ಯಾಚರಣೆ:
ಹನೀಫ್ ಅವರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಬುಧವಾರ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ದಾಳಿ ನಡೆಯಿತು. ಲಂಚ ಪಡೆಯುತ್ತಿದ್ದ ವೇಳೆಯಲ್ಲೇ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಯಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು