ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಉಡುಪಿಯ ಪೇಜಾವರ ಶ್ರೀ ಮತ್ತು ಕಾಣಿಯೂರು ಸ್ವಾಮೀಜಿ ಜೊತೆಯಾಗಿ ಮಣಿಪಾಲ್ ನ ಮಾಲ್ ವೊಂದರಲ್ಲಿ ವೀಕ್ಷಣೆ ಮಾಡಿದರು.
ಮೊಟ್ಟಮೊದಲ ಬಾರಿಗೆ ಮಾಲ್ಗೆ ತೆರಳಿದ ಸ್ವಾಮೀಜಿಗಳು ನೈಜ ಕತೆಯಾಧಾರಿತ ಚಿತ್ರ ವೀಕ್ಷಣೆ ಮಾಡಿದರು.
ಪರ-ವಿರೋಧ ಚರ್ಚೆಯ ನಡುವೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಥಿಯೇಟರ್ಗೆ ತೆರಳಿ ಚಲನಚಿತ್ರವನ್ನು ವೀಕ್ಷಣೆ ಮಾಡಿದರು.
ಸಿನಿಮಾ ಮಂದಿರಕ್ಕೆ ಸ್ವಾಮೀಜಿಗಳು ಭೇಟಿ ನೀಡಿದ್ದು ಇದೇ ಮೊದಲು. ಮಣಿಪಾಲಕ್ಕೆ ತಮ್ಮ ಜೊತೆಗೆ ಮಠದ 35 ಶಿಷ್ಯರನ್ನು ಕೂಡ ಕರೆದೊಯ್ದಿದ್ದರು. ತಮ್ಮ ಬಿಡುವಿಲ್ಲದ ಕಾರ್ಯಚಟುವಟಿಕೆಗಳ ನಡುವೆಯೂ ಶೋ ನೋಡಲು ಯತಿಗಳಿಗೆ ವ್ಯವಸ್ಥೆ ಮಾಡಲಾಗಿತ್ತು.
ಈ ಹಿಂದೆ ʼಉರಿʼ ಚಲನಚಿತ್ರ ಬಿಡುಗಡೆಯಾದಾಗ ಪೇಜಾವರ ಮಠದ ಹಿರಿಯ ಯತಿಗಳಾದ ಕೀರ್ತಿಶೇಷ ವಿಶ್ವೇಶತೀರ್ಥರು ತಮ್ಮ ಶಿಷ್ಯರೊಂದಿಗೆ ಸಿನಿಮಾ ನೋಡಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ