ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವ ಅ.17ರಂದು ಭಾನುವಾರ ಮಧ್ಯಾಹ್ನ 1.11ಕ್ಕೆ ನಡೆಯಲಿದೆ.
ಕೋವಿಡ್ ನಿಬಂಧನೆಗಳ ನೆಪ ಹೇಳಿ ಭಕ್ತರಿಗೆ ತೀಥೋದ್ಭವ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಈ ನಿಬ೯ಂಧ ಕೊಡವರ ಭಾವನೆಗಳಗೆ ಧಕ್ಕೆ ತಂದಿದೆ ಎಂದು ಜನ ಆಕ್ರೋಶ ವ್ಯಕ್ತಡಿಸಿದ್ದಾರೆ.
ನಿಬಂಧನೆಗಳು ಏನು ?
ಭಕ್ತರು 72 ಗಂಟೆಯ ಕೋವಿಡ್ ನೆಗೆಟಿವ್ ವರದಿ ಪ್ರಮಾಣಪತ್ರ ಹಾಗೂ 1 ಡೋಸ್ ಲಸಿಕೆ ಪಡೆದಿರಬೇಕು, ಗುರುತಿನ ಚೀಟಿ ಕಡ್ಡಾಯಗೊಳಿಸಿದೆ. ಕೋವಿಡ್ ಇನ್ನೂ ದೂರವಾಗಿಲ್ಲ. ಹೀಗಾಗಿ ಕೆಲವು ನಿರ್ಬಂಧ ವಿಧಿಸುವುದು ಅನಿವಾರ್ಯ ಎಂದು ಜಿಲ್ಲಾ ಮಂತ್ರಿ ಪೂಜಾರಿ ಹೇಳಿದ್ದಾರೆ.
ಭಾಗಮಂಡಲದಿಂದ ತಲಕಾವೇರಿಗೆ ಕಾಲ್ನಡಿಗೆಯಲ್ಲಿ ಬರುವ ಭಕ್ತರಿಗೆ ಮಾತ್ರ ತೀರ್ಥೋದ್ಭವದ ವೇಳೆ ಅವಕಾಶ ಇರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇದು ಭಕ್ತರ ಆಕ್ರೋಶ ಕಾರಣ ಆಗಿದೆ.
ಈಗಾಗಲೇ ಎಲ್ಲಾ ಚಟುವಟಿಕೆಗಳಿಗೂ ಅನುಮತಿ ನೀಡಲಾಗಿದೆ. ಆದರೆ ಕಾವೇರಿ ತೀರ್ಥೋದ್ಭವ ದರ್ಶನಕ್ಕೆ ನಿರ್ಬಂಧ ಹೇರಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ಒಂದು ವೇಳೆ ನಿರ್ಬಂಧ ಸಡಿಲಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಕೊಡವರು ಹೋರಾಟದ ಎಚ್ಚರಿಕೆ ನೀಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ