ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
200 7 ರಲ್ಲೇ ಸೆಷನ್ ಕೋಟ್ ೯ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನಂತರ ಹೈಕೋರ್ಟ್ ,ಸುಪ್ರೀಂ ಕೋಟ್೯ ಕೂಡ ಗಲ್ಲು ಶಿಕ್ಷೆ ತೀರ್ಪನ್ನು ಖಾಯಂ ಮಾಡಿ ಆದೇಶ ಮಾಡಿತ್ತು. ರಾಷ್ಟ್ರಪತಿಗಳು ಕೂಡ ಕ್ಷಮಾಧಾನ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ್ದರು.
ವಿಕೃತಕಾಮಿ ಉಮೇಶ್ ರೆಡ್ಡಿ ಪುನಃ ಗಲ್ಲು ಶಿಕ್ಷೆ ಕಡಿತ ಮಾಡಿ, ಜೀವಾವಧಿ ಶಿಕ್ಷೆ ಯಾಗಿ ಪರಿವರ್ತನೆ ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನೂ ಕೂಡ ತಿರಸ್ಕರಿಸಿ, ಗಲ್ಲು ಶಿಕ್ಷೆ ಖಾಯಂ ಮಾಡಿ ಆದೇಶ ನೀಡಿದೆ.
ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2007 ರಲ್ಲಿ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಸುಪ್ರೀಂ ಕೋರ್ಟ್ ಕೂಡ ಗಲ್ಲು ಶಿಕ್ಷೆ ಆದೇಶವನ್ನು ಎತ್ತಿಹಿಡಿದಿತ್ತು. ಗಲ್ಲು ಶಿಕ್ಷೆಯನ್ನು ಪರಿವರ್ತಿಸುವಂತೆ ಉಮೇಶ್ ರೆಡ್ಡಿ ಮನವಿ ಸಲ್ಲಿಸಿದ್ದ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಉಮೇಶ್ ರೆಡ್ಡಿ ಜಿಲ್ಲಾ ಸಶಸ್ತ್ರ ಪಡೆಯ ಪೋಲಿಸ್ ಪೇದೆಯಾಗಿ 1996 ರಲ್ಲೇ ಆಯ್ಕೆ ಯಾಗಿದ್ದನು. ನಂತರ ಕೇಂದ್ರೀಯ ಮೀಸಲು ಪಡೆಗೆ ಆಯ್ಕೆ ಯಾಗಿ ಜಮ್ಮು ಕಾಶ್ಮೀರ ದ ಸೇನಾಧಿಕಾರಿಯ ನಿವಾಸದ ಕಾವಲುಗಾರನಾಗಿದ್ದ ವೇಳೆಯಲ್ಲಿ ಅಧಿಕಾರಿಯ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾಗಿದ್ದನು. ಅಲ್ಲಿಂದ ತಲೆ ತಪ್ಪಿಸಿಕೊಂಡು ಚಿತ್ರದುರ್ಗ ಕ್ಕೆ ಓಡಿ ಬಂದಿದ್ದನು.
ನಂತರ ಆತ ಸುಮಾರು 18 ಮಂದಿ ಮಹಿಳೆಯರ ಮೇಲೆ ವಿಕೃತವಾಗಿ ಅತ್ಯಾಚಾರ ಮಾಡಿ , ಕೊಲೆ ಮಾಡಿರುವ ಪ್ರಕರಣಗಳನ್ನು ಆರೋಪಿ ಉಮೇಶ್ ರೆಡ್ಡಿ ಒಪ್ಪಿಕೊಂಡಿದ್ದಾನೆ.
ಹೈಕೋರ್ಟ್ ನ ಇಂದಿನ ತೀರ್ಪು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಹೈಕೋರ್ಟ್ 6 ವಾರ ಮತ್ತೆ ಕಾಲಾವಕಾಶ ನೀಡಿದೆ. ಈಗಾಗಲೇ ಈತ ಕಳೆದ 10 ವರ್ಷಗಳಿಂದ ಜೈಲಿನಲ್ಲೇ ಇದ್ದಾನೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment