ಸರ್ಕಾರಿ ನೌಕರರು ಅಧಿಕೃತ ವ್ಯವಹಾರ ಹೊಂದಿರುವ ವ್ಯಕ್ತಿಯೊಂದಿಗೆ ಸ್ಥಿರಾಸ್ತಿ ವಿಲೇವಾರಿ ವ್ಯವಹಾರ ಮಾಡುವ ಮುನ್ನ ನೇಮಿಸಲಾದ ಪ್ರಾಧಿಕಾರಿಯ ಪೂರ್ವ ಅನುಮತಿ ಪಡೆಯಬೇಕಾಗಿದೆ.
ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ
ಸರ್ಕಾರಿ ನೌಕರರು ಸ್ಥಿರಾಸ್ತಿ ವಿಲೇವಾರಿ ಮಾಡುವಾಗ ಅಧಿಕೃತ ವ್ಯಕ್ತಿಯೊಂದಿಗಿನ ವ್ಯವಹಾರದ ಬಗ್ಗೆ ನೇಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಪಡೆಯುವ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದೆ.
ಕಳೆದ ಜ.7ರಿಂದ ಜಾರಿಗೆ ಬಂದಿರುವ ಕಾಯ್ದೆ ಪ್ರಕಾರ ಅಧಿಕೃತ ವ್ಯವಹಾರ ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ ಬೇರೆ ಮೂಲಗಳಿಂದ ಸರ್ಕಾರಿ ನೌಕರರು ತಮ್ಮ ಹೆಸರಿನಲ್ಲಾಗಲಿ ಅಥವಾ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಾಗಲಿ ಗುತ್ತಿಗೆ, ಅಡಮಾನ, ಖರೀದಿ, ಮಾರಾಟ, ಉಡುಗೊರೆ ಮೂಲಕ ಸ್ಥಿರ ಸ್ವತ್ತನ್ನು ವಿಲೇವಾರಿ ಮಾಡುವಾಗ ನೇಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು.
ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಕ್ಕೆ ಮೊದಲೇ ತಿಳಿಸದೆ ಸ್ಥಿರ ಸ್ವತ್ತನ್ನು ವಿಲೇವಾರಿ ಮಾಡಿದಾಗ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗೆ ವಿವರ ಹಾಗೂ ಪೂರಕ ದಾಖಲೆ ಮತ್ತು ಸಮರ್ಥ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಕ್ಕೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ನೌಕರ ನೀಡಿದ ಕಾರಣ ಅಂಗೀಕಾರಕ್ಕೆ ಅರ್ಹವೆಂದು ತೃಪ್ತಿಪಟ್ಟಲ್ಲಿ ನೌಕರರು ಸಲ್ಲಿಸಿದ ದಾಖಲೆ ಮತ್ತು ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹಾರವನ್ನು ಘಟನೋತ್ತರವಾಗಿ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ.
ಸರ್ಕಾರಿ ನೌಕರ ತನ್ನ ಸ್ವಂತ ಹೆಸರಿನಲ್ಲಾಗಲಿ ಅಥವಾ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಿ ಒಡೆತನ ಹೊಂದಿರುವ ಚರಾಸ್ತಿಗೆ ಸಂಬಂಧಿಸಿದಂತೆ ಮಾಡುವ ಪ್ರತಿಯೊಂದು ವ್ಯವಹಾರಕ್ಕೂ ಮುನ್ನ ನೇಮಿಸಲಾದ ಪ್ರಾಧಿಕಾರದ ಪೂರ್ವ ಮಂಜೂರಾತಿ ಪಡೆಯಬೇಕು. ಸ್ವತ್ತಿನ ಮೌಲ್ಯವು ಸರ್ಕಾರಿ ನೌಕರರ ಮಾಸಿಕ ಮೂಲ ವೇತನ ಮೀರಿದಾಗ ಈ ಮಂಜೂರಾತಿ ಪಡೆಯುವ ಅಗತ್ಯವದೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ