ಸರ್ಕಾರಿ ನೌಕರರು ಅಧಿಕೃತ ವ್ಯವಹಾರ ಹೊಂದಿರುವ ವ್ಯಕ್ತಿಯೊಂದಿಗೆ ಸ್ಥಿರಾಸ್ತಿ ವಿಲೇವಾರಿ ವ್ಯವಹಾರ ಮಾಡುವ ಮುನ್ನ ನೇಮಿಸಲಾದ ಪ್ರಾಧಿಕಾರಿಯ ಪೂರ್ವ ಅನುಮತಿ ಪಡೆಯಬೇಕಾಗಿದೆ.
ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ
ಸರ್ಕಾರಿ ನೌಕರರು ಸ್ಥಿರಾಸ್ತಿ ವಿಲೇವಾರಿ ಮಾಡುವಾಗ ಅಧಿಕೃತ ವ್ಯಕ್ತಿಯೊಂದಿಗಿನ ವ್ಯವಹಾರದ ಬಗ್ಗೆ ನೇಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಪಡೆಯುವ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದೆ.
ಕಳೆದ ಜ.7ರಿಂದ ಜಾರಿಗೆ ಬಂದಿರುವ ಕಾಯ್ದೆ ಪ್ರಕಾರ ಅಧಿಕೃತ ವ್ಯವಹಾರ ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ ಬೇರೆ ಮೂಲಗಳಿಂದ ಸರ್ಕಾರಿ ನೌಕರರು ತಮ್ಮ ಹೆಸರಿನಲ್ಲಾಗಲಿ ಅಥವಾ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಾಗಲಿ ಗುತ್ತಿಗೆ, ಅಡಮಾನ, ಖರೀದಿ, ಮಾರಾಟ, ಉಡುಗೊರೆ ಮೂಲಕ ಸ್ಥಿರ ಸ್ವತ್ತನ್ನು ವಿಲೇವಾರಿ ಮಾಡುವಾಗ ನೇಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು.
ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಕ್ಕೆ ಮೊದಲೇ ತಿಳಿಸದೆ ಸ್ಥಿರ ಸ್ವತ್ತನ್ನು ವಿಲೇವಾರಿ ಮಾಡಿದಾಗ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗೆ ವಿವರ ಹಾಗೂ ಪೂರಕ ದಾಖಲೆ ಮತ್ತು ಸಮರ್ಥ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಕ್ಕೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸರ್ಕಾರಿ ನೌಕರ ನೀಡಿದ ಕಾರಣ ಅಂಗೀಕಾರಕ್ಕೆ ಅರ್ಹವೆಂದು ತೃಪ್ತಿಪಟ್ಟಲ್ಲಿ ನೌಕರರು ಸಲ್ಲಿಸಿದ ದಾಖಲೆ ಮತ್ತು ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹಾರವನ್ನು ಘಟನೋತ್ತರವಾಗಿ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ.
ಸರ್ಕಾರಿ ನೌಕರ ತನ್ನ ಸ್ವಂತ ಹೆಸರಿನಲ್ಲಾಗಲಿ ಅಥವಾ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಿ ಒಡೆತನ ಹೊಂದಿರುವ ಚರಾಸ್ತಿಗೆ ಸಂಬಂಧಿಸಿದಂತೆ ಮಾಡುವ ಪ್ರತಿಯೊಂದು ವ್ಯವಹಾರಕ್ಕೂ ಮುನ್ನ ನೇಮಿಸಲಾದ ಪ್ರಾಧಿಕಾರದ ಪೂರ್ವ ಮಂಜೂರಾತಿ ಪಡೆಯಬೇಕು. ಸ್ವತ್ತಿನ ಮೌಲ್ಯವು ಸರ್ಕಾರಿ ನೌಕರರ ಮಾಸಿಕ ಮೂಲ ವೇತನ ಮೀರಿದಾಗ ಈ ಮಂಜೂರಾತಿ ಪಡೆಯುವ ಅಗತ್ಯವದೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment