ಕೆಂಪೇಗೌಡ ಜಯಂತಿಯನ್ನು ಮೈಸೂರು ದಸರಾ ಮಾದರಿಯಲ್ಲಿ ಆಚರಣೆ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಅದಕ್ಕೂ ಸರ್ಕಾರ ಒಪ್ಪಿದೆ ಎಂದರು.ಇದನ್ನು ಓದಿ –ರಾಜ್ಯದಲ್ಲಿ ಮತ್ತೆ ಜುಲೈ 1ರಿಂದ ವಿದ್ಯುತ್ ದರ ಏರಿಕೆ
ನಾಡಿನಲ್ಲಿ ಕ್ರಾಂತಿಯ, ಭಕ್ತಿಯ ಕಹಳೆ ಮೊಳಗಿಸಿದವರು ಕುವೆಂಪು. ಶೂದ್ರ ಸಮುದಾಯದಲ್ಲಿ ಕವಿಗಳು, ಜ್ಞಾನಿಗಳು, ನಾಯಕರು ಉದಯಿಸಿದ್ದಾರೆ. ಅದೇ ಶೂದ್ರ ಸಮುದಾಯದ ಕವಿ ಕನ್ನಡ ಸಾಹಿತ್ಯ ಲೋಕಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟರು ಎಂದರು.
ಕೆಂಪೇಗೌಡರ ಪ್ರತಿಮೆಯನ್ನು ಈ ಹಿಂದೆಯೇ ವಿಧಾನಸೌಧ ಎದುರು ನಿರ್ಮಿಸಬೇಕಿತ್ತು. ವಿಳಂಬವಾಗಿದೆ. ಪ್ರತಿಮೆ ನಿರ್ಮಿಸುವಂತೆ ಮನವಿ ಮಾಡಲಾಗಿದ್ದು, ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆ ಎಂದರು. ಕೆಂಪೇಗೌಡ ಪಾಳೆಗಾರರು ಆಗಿರಲಿಲ್ಲ, ರಾಜರಾಗಿದ್ದರು. ಅದಕ್ಕೇ ಕೆಂಪೇಗೌಡರು ನಾಡಪ್ರಭು ಆಗಿದ್ದು. ನಗರದಲ್ಲಿ 60 ಪೇಟೆಗಳನ್ನು ನಿರ್ಮಿಸಿ ನಾಡಿನ ಅಭಿವೃದ್ಧಿ ಪಡಿಸಿದ್ದರು.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಾತನಾಡಿ, ‘ಒಕ್ಕಲಿಗ ಸಮುದಾಯವು ಒಡೆಯಬಾರದು. ಸಮುದಾಯ ಉಳಿಯಬೇಕು’ ಎಂದರು. ಒಕ್ಕಲಿಗರ ಸಂಘಕ್ಕೆ ಸಾಕಷ್ಟು ಮಂದಿ ಶ್ರಮಿಸಿದ್ದಾರೆ. ಮುಂದೆಯೂ ಸಂಘವು ಉತ್ತಮ ಕೆಲಸ ಮಾಡಲಿ. ಇಬ್ಬರೂ ಸ್ವಾಮೀಜಿಗಳು ಒಕ್ಕಲಿಗ ಸಮಾಜಕ್ಕೆ ಶಕ್ತಿ ತುಂಬುತ್ತಿದ್ದಾರೆ ಎಂದು ಹೇಳಿದರು.
ಶಿರಾ ತಾಲ್ಲೂಕು ಪಟ್ಟನಾಯನಹಳ್ಳಿ ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಮಾತನಾಡಿ, ಅವಮಾನಿಸುವ ಮನಸ್ಸುಗಳಿಗೆ ಉತ್ತರ ಕೊಡಬೇಕಿದೆ ಎಂದು ಕರೆ ನೀಡಿದರು.
ತಪ್ಪು ಇತಿಹಾಸ ಬರೆದು, ತಪ್ಪಾಗಿಯೇ ಮಕ್ಕಳಿಗೆ ಬೋಧಿಸಿದರೆ ಅವರ ಭವಿಷ್ಯ ಏನಾಗಬೇಕು ಎಂದು ಪ್ರಶ್ನಿಸಿದರು. ಸಂಸದ ಡಿ.ವಿ.ಸದಾನಂದಗೌಡ ಮಾತನಾಡಿ, ‘ಆದರ್ಶದ ಅನುಷ್ಠಾನದಲ್ಲಿ ಕೊರತೆಯಿದೆ. ಮಾತನಾಡುವುದೇ ಆಡಳಿತ ಆಗಬಾರದು. ಆಡಳಿತ ವ್ಯವಸ್ಥೆಗೆ ಹೊಸದಿಕ್ಕು ಕಲ್ಪಿಸಿದವರು ಕೆಂಪೇಗೌಡರು’ ಎಂದು ಹೇಳಿದರು.
ಎಚ್ಡಿಕೆ ‘ನನ್ನ ಸಹೋದರ‘ ಡಿ.ಕೆ.ಶಿ
ವೇದಿಕೆಯ ಮೇಲಿದ್ದ ಗಣ್ಯರ ಹೆಸರು ಹೇಳುವಾಗ ಡಿ.ಕೆ.ಶಿವಕುಮಾರ ಅವರನ್ನು ಸಹೋದರ ಎಂದು ಹೇಳಿದಾಗ ಸಭಿಕರು ಶಿಳ್ಳೆ ಹಾಕಿದರು.
ಜಯಂತಿ ಅಂಗವಾಗಿ ವಿವಿಧ ಕಲಾ ತಂಡಗಳ ನೇತೃತ್ವದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆ ವೃತ್ತದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು. ಜಾನಪದ ಗೀತಗಾಯನ ಹಾಗೂ ಕೆಂಪೇಗೌಡ ನೃತ್ಯರೂಪಕ ಗಮನ ಸೆಳೆಯಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು