ಪಾಂವಪುರ -ಇಂಥದ್ದೊಂದು ಸಿನಿಮಾವನ್ನು ನೋಡಲೇಬೇಕು ಎಂದು ಪ್ರಚಾರ ಆದ ಪರಿಣಾಮಮಂಡ್ಯದ ಪಾಂಡವಪುರ ಸಮೀಪದ ಹಾರೋಹಳ್ಳಿ ಗ್ರಾಮದ ನಿವಾಸಿ ಡೈಮಂಡ್ ರವಿ ಪಾಂಡವಪುರದ ಕೋಕಿಲ ಚಿತ್ರಮಂದಿರಕ್ಕೆ ಹೋಗಿ ಒಬ್ಬರೇ ಕೂತು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿದ್ದಾರೆ.
ಈ ಸಿನಿಮಾ ನೋಡಲು ರವಿ ಪಾಂಡವಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿರುವ ಈ ಥಿಯೇಟರ್ ನಲ್ಲಿ ಸಿನಿಮಾ ಪ್ರದರ್ಶನವಿದ್ದರೂ, ಯಾರೂ ಬಂದಿಲ್ಲ.
ಹಾಗಾಗಿ ಮೊದ ಮೊದಲು ರವಿಗೆ ನಿರಾಸೆಯಾಗಿದೆ. ಒಬ್ಬನೇ ಇದ್ದ ಕಾರಣಕ್ಕಾಗಿ ಪ್ರದರ್ಶನ ರದ್ದು ಮಾಡುವುದಾಗಿ ಥಿಯೇಟರ್ ಮಾಲೀಕರು ಹೇಳಿದ್ದಾರೆ.
ತಾನು ಈ ಸಿನಿಮಾ ನೋಡಲೇಬೇಕೆಂದು ಬಂದಿದ್ದರಿಂದ ಏನು ಮಾಡುವುದೆಂದು ತಿಳಿಯದೇ, ಪ್ರದರ್ಶನ ಮಾಡಲು ಎಷ್ಟು ಟಿಕೇಟ್ ತಗೆದುಕೊಳ್ಳಬೇಕು ಎಂದು ಕೇಳಿದ್ದಾನೆ.
ಕನಿಷ್ಠ ಹತ್ತು ಟಿಕೇಟ್ ಆದರೂ ಕೊಂಡರೆ, ಸಿನಿಮಾ ತೋರಿಸುವುದಾಗಿ ಮಾಲೀಕರು ಹೇಳಿದ್ದಾರೆ. ತಾನೊಬ್ಬನೇ ಅಷ್ಟೂ ಟಿಕೇಟ್ ತಗೆದುಕೊಂಡು ಏಕಾಂಗಿ ಆಗಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ್ದಾರಂತೆ ಡೈಮಂಡ್ ರವಿ.
ಒಬ್ಬರೇ ಸಿನಿಮಾ ವೀಕ್ಷಿಸುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರವಿಯ ದೇಶಪ್ರೇಮ ಕಂಡ ಹಲವರು ಹೊಗಳುತ್ತಿದ್ದಾರೆ. ಇಂತಹ ಸಿನಿಮಾವನ್ನು ಒಬ್ಬರೇ ನೋಡುವಾಗ ಭಯವಾಗಲಿಲ್ಲವೆ ಎಂದು ಪ್ರಶ್ನೆಯನ್ನೂ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು