ಪೆಟ್ರೋಲ್, ಡೀಸೆಲ್ ಹಾಗೂ ಆಹಾರ ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಂಡ್ಯ ನಗರದಲ್ಲಿ ಪ್ರತಿಭಟನೆ ಮಂಗಳವಾರ ನಡೆಸಿದರು.
ಸಂಘಟನೆಯ ಕಾರ್ಯಕರ್ತರು ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಕೆಲಕಾಲ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜನಸಾಮಾನ್ಯರು ಪ್ರತಿನಿತ್ಯ ಬಳಕೆ ಮಾಡುವ ಪದಾರ್ಥಗಳ ಬೆಲೆ ಏರಿಕೆಯಾಗಲು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ನೇರ ಹೊಣೆಯಾಗಿದೆ ಎಂದು ದೂರಿದರು.
ಅಂತರ ರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಿಂದ ಪೆಟ್ರೋಲ್ ಡೀಸೆಲ್ ದರ ಹೆಚ್ಚಳವಾಗಿದೆ ಎಂದು ಸಬೂಬು ಹೇಳುವ ಆಳುವ ಸರ್ಕಾರಗಳು ಪೆಟ್ರೋಲ್ ಗೆ ಮೂಲದರ 31 ರು ಇದ್ದರೆ, ಕೇಂದ್ರ ಸರ್ಕಾರ 16.5, ರಾಜ್ಯ ಸರ್ಕಾರ 38.5 ರೂ. ತೆರಿಗೆ ಹಾಕಿದ್ದಾರೆ. ಕಮಿಷನ್ 6.5 ರೂ ನಿಂದ ಜನಸಾಮಾನ್ಯರಿಗೆ ದುಬಾರಿ ಹೊರಬಿದ್ದಿದೆ ಎಂದು ಕಿಡಿಕಾರಿದರು.
ಅಗತ್ಯವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಬಡಜನತೆಯ ಜೀವನ ಮಾಡುವುದು ದುಸ್ತರವಾಗಿದೆ. ಅಡುಗೆ ಅನಿಲ.ಅಕ್ಕಿ,ಬೇಳೆ,ಎಣ್ಣೆ ಪದಾರ್ಥಗಳನ್ನು ಜನತೆ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಜನರ ಬದುಕನ್ನು ಬೀದಿಗೆ ತಳ್ಳುತ್ತಿದ್ದಿರಿ. ಇದು ಅಚ್ಚೆದಿನವಾ ಎಂದು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಪ್ರತಿವರ್ಷ 2 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು.ಆದರೆ ಉದ್ಯೋಗ ಸೃಷ್ಟಿಯಾಗಿಲ್ಲ,ಇದರಿಂದ ಯುವಜನರ ಬದುಕು ಸಂಕಷ್ಟ ಮಯವಾಗಿದೆ ರೈತರ ಬದುಕನ್ನು ಮೂರಾಬಟ್ಟೆ ಮಾಡಲಾಗಿದೆ ಎಂದು ಆಕ್ರೋಶಿಸಿದರು.
ಜನಸಾಮಾನ್ಯರು ಕೈಗೆಟಕುವ ದರದಲ್ಲಿ ಆಹಾರ ಪದಾರ್ಥಗಳನ್ನು ಖರೀದಿ ಸುವಂತಾಗಬೇಕು. ಕಳ್ಳತನ ಸುಲಿಗೆ ಮಾಡದೆ ಜನತೆ ಸ್ವಾಭಿಮಾನದಿಂದ ಬದುಕಬೇಕು, ಇದು ನಿಜವಾಗಿಯೂ ಅಚ್ಚೆ ದಿನ ಆದರೆ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಿದ ತಪ್ಪಿಗೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಜನರು ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಸಂಘಟನೆಯ ಯೋಗಣ್ಣ, ವಿನಯ್.ರವೀಂದ್ರ.ಅರುಣ್, ಬೋರೇಗೌಡ, ಮಾಲತಿ, ಗೀತಾ ನೇತೃತ್ವ ವಹಿಸಿದ್ದರು
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment