ಸಹಿ ಪೋರ್ಜರಿ ಮಾಡಿ 2.35 ಕೋಟಿ ರು ಸರ್ಕಾರಿ ಹಣ ಮಂಜೂರಾತಿಗೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ FIR ದಾಖಲಾಗಿದೆ.
ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಅವರ ಸಹಿ ಫೋರ್ಜರಿ ಮಾಡಿರುವ ಆರೋಪದ ಮೇಲೆ ರವಿಕುಮಾರ್ ಮೇಲೆ ಎಫ್ಐಆರ್ ದಾಖಲಾಗಿದೆ.
ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ IPC 420, 506, 504, 509, 380, 465, 468, 471 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಭೋವಿ ಅಭಿವೃದ್ಧಿ ನಿಗಮದ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ಸಹಿಯನ್ನು ನಕಲು ಮಾಡಿ 2.35 ಕೋಟಿ ಲೂಟಿ ಮಾಡಲು ಪ್ಲಾನ್ ಮಾಡಿರುವ ಆರೋಪ ರವಿಕುಮಾರ್ ಮೇಲೆ ಇದೆ. ಹೀಗಾಗಿ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಐಪಿಸಿ 420 ಅಡಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಹಾಗೂ ಪ್ರಧಾನ ವ್ಯವಸ್ಥಾಪಕ ಡಾ. ಬಿ.ಕೆ ನಾಗರಾಜಪ್ಪ ದೂರು ದಾಖಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ರವಿಕುಮಾರ್ ಪರಾರಿಯಾಗಿದ್ದಾನೆ .
ಕಳೆದ ಮಾರ್ಚ್ನಲ್ಲಿ ನಿಗಮಕ್ಕೆ ಸೇರಿದ್ದ ಐಸಿಐಸಿಐ ಬ್ಯಾಂಕ್ನ ಚೆಕ್ಗಳು ಕಳುವಾಗಿದ್ದವು. ಹೀಗಾಗಿ ಐಸಿಐಸಿಐ ಬ್ಯಾಂಕ್ಗೆ ಭೋವಿ ಅಭಿವೃದ್ಧಿ ನಿಗಮ ದೂರು ನೀಡಿತ್ತು.
ಕಳುವಾಗಿದ್ದ ಚೆಕ್ ಬಳಸಿ ರಾಯಚೂರು ಜಿಲ್ಲೆಗೆ 52 ಲಕ್ಷ ರು ಹಣವನ್ನು ನಿರ್ದೇಶಕ ರವಿಕುಮಾರ್ ಜಮಾ ಮಾಡಿದ್ದರಂತೆ. 52 ಲಕ್ಷ ಅಕ್ರಮವಾಗಿ ಜಮಾ ಮಾಡಿರುವುದಲ್ಲದೇ 60 ಅಕ್ರಮ ಫಲಾಪೇಕ್ಷಿಗಳ ಹೆಸರಲ್ಲಿ 1 ಕೋಟಿ 83 ಲಕ್ಷ ಹಣ ಮಂಜೂರಾತಿಗೆ ಸಹಿ ಫೊರ್ಜರಿ ಮಾಡಿದ್ದರು.
ಏಳು ಜಿಲ್ಲೆಯ ಅಧಿಕಾರಿಗಳಿಗೆ ಇ-ಮೇಲ್ ಕಳುಹಿಸಿರೋದು ಗೊತ್ತಾಗಿದೆ. ಮೇ 04 ರಂದು ಭೋವಿ ಅಭಿವೃದ್ಧಿ ನಿಗಮ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರವಿಕುಮಾರ್ ಅಕ್ರಮ ಮಾಡಿರೋದು ಎಲ್ಲರ ಗಮನಕ್ಕೆ ಬಂದಿದೆ ಎನ್ನಲಾಗಿದೆ.
ಇದನ್ನ ಪ್ರಶ್ನಿಸಲು ಮುಂದಾದ ಕೆಎಎಸ್ ಅಧಿಕಾರಿಗಳಿಗೆ ರವಿಕುಮಾರ್ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment