Karnataka

ಏರೋ ಇಂಡಿಯಾ-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಚಾಲನೆ ನೀಡಿದರು.

ದೇಶದ 32 ದೇಶದ ರಕ್ಷಣಾ ಸಚಿವರು, 29 ರಾಷ್ಟ್ರಗಳ ವಾಯುಪಡೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿವೆ.ಮೀನು ಹಿಡಿಯಲು ತೆರಳಿದ್ದ ಅಣ್ಣ, ತಮ್ಮ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಸಾರಂಗ್, ಸೂರ್ಯಕಿರಣ್, ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೆಲ್ ತೇಜಸ್ ಸೇರಿದಂತೆ ಒಟ್ಟು 67 ವಿಮಾನಗಳಿಂದ ಸಾಹಸ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ 44 ವಿಮಾನಗಳು ಪ್ರದರ್ಶನ ತೋರಿದ್ದವು.

ಏರ್ ಶೋನ ಮೊದಲ ಮೂರು ದಿನ ವಹಿವಾಟಿಗೆ ಸೀಮಿತಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಫೆ.16, 17 ರಂದು ಮಾತ್ರ ವೈಮಾನಿಕ ಪ್ರದರ್ಶನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ನಿರ್ಮಿತ ಯುದ್ಧ ವಿಮಾನ ಹೆಲಿಕಾಪ್ಟರ್ ಹಾಗೂ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿಯೇ ಪ್ರತ್ಯೇಕವಾಗಿ ಇಂಡಿಯನ್ ಪೆವಿಲಿಯನ್ ನಿರ್ಮಾಣ ಮಾಡಲಾಗಿದೆ. ಅದರಲ್ಲಿ 115 ಕಂಪನಿಗಳು, 227 ಉತ್ಪನ್ನಗಳ ಪ್ರದರ್ಶನಕ್ಕಿಡಲಾಗುತ್ತಿದೆ. 149 ಉತ್ಪನ್ನಗಳನ್ನು ಭೌತಿಕವಾಗಿಯೇ ಪ್ರದರ್ಶಿಸಲಾಗಿದೆ.

2023ರ ವಿಶೇಷತೆ:

2023ರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ 98 ದೇಶಗಳಿಂದ 809 ಪ್ರದರ್ಶಕರು ಪಾಲ್ಗೊಂಡಿದ್ದಾರೆ, 67 ವಿಮಾನಗಳನ್ನು ಪ್ರದರ್ಶಿಸಲಾಗುತ್ತಿದೆ. ಒಟ್ಟು 75 ಸಾವಿರ ಕೋಟಿ ರೂ. ಗಳ 251 ಒಪ್ಪಂದಗಳು ನಡೆಯಲಿವೆ. 32 ವಿದೇಶಿ ರಕ್ಷಣಾ ಸಚಿವರು ಹಾಗೂ ವಿವಿಧ ದೇಶಗಳ 29 ವಾಯುಪಡೆ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

ಏರ್ ಶೋ ನಲ್ಲಿ 100ಕ್ಕೂ ಅಧಿಕ ಮಿತ್ರ ರಾಷ್ಟ್ರಗಳು ಭಾಗಿಯಾಗಲಿದ್ದು, ಕಳೆದ ಎಲ್ಲಾ ವರ್ಷಗಳ ದಾಖಲೆಯನ್ನ ಈ ಬಾರಿ ಏರ್ ಶೋ ಮುರಿಯುವ ವಿಶ್ವಾಸವಿದೆ ಅಂತಾ ರಕ್ಷಣಾ ಸಚಿವರು ಹೇಳಿದ್ದಾರೆ. ಒಟ್ಟಿನಲ್ಲಿ 5 ದಿನಗಳ ಕಾಲ ಬಾನಂಗಳದಲ್ಲಿ ಲೋಹದ ಹಕ್ಕಿಗಳು ಚಮತ್ಕಾರ, ಕಮಾಲ್ ನೋಡಿ ಪ್ರೇಕ್ಷಕರ ಮನೋಲ್ಲಾಸ ಹೊಂದಬಹುದು.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024