ಭಾರತ ಮುಂದಿನ 25 ವರ್ಷಗಳಲ್ಲಿ ಎಲ್ಲಾ ಸೌಲಭ್ಯ ಗಳನ್ನು ಒಳಗೊಂಡು ವಿಶ್ವದಲ್ಲೇ ಅತ್ಯಂತ ಪ್ರಗತಿ ರಾಷ್ಟ್ರವಾಗಿ ಹೊರ ಹೊಮ್ಮಿಸುವ ಸಂಕಲ್ಪ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸದಿಂದ ಹೇಳಿದರು.
ನವ ದೆಹಲಿಯಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಪ್ರಧಾನಿ ಮೋದಿ ಧ್ವಜಾರೋಹಣ ನಡೆಸುವ ಮೂಲಕ ಚಾಲನೆ ನೀಡಿದರು.
ದ್ವಜಾರೋಹಣದ ಬಳಿಕ ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿ ಮಾತನಾಡಿದ ಮೋದಿ ಅವರು, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ನಾಡಿನ ಜನತೆಯ ಹೋರಾಟ, ದೇಶದ ಅತೀ ದೊಡ್ಡ ಲಸಿಕಾ ಅಭಿಯಾನ ಹಾಗೂ ಒಲಂಪಿಕ್ಸ್ ನಲ್ಲಿ ಯುವ ಕ್ರೀಡಾಪಟುಗಳು ಮಾಡಿದ ಸಾಧನೆಯ ಕುರಿತು ಪ್ರಸ್ತಾಪ ಮಾಡಿ ಮೆಚ್ಚುಗೆ ಸೂಚಿಸಿದರು.
ದೇಶದ 54 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಇದು ವಿಶ್ವದ ಅತೀ ದೊಡ್ಡ ಲಸಿಕಾ ಅಭಿಯಾನವಾಗಿದೆ ಎಂದರು.
ಮೊದಲಿಗಿಂತ ಈಗ ಸರ್ಕಾರ ಯೋಜನೆಗಳ ವೇಗ ಹೆಚ್ಚಿದೆ. ಪಿಂಚಣಿ ಯೋಜನೆ, ವಸತಿ ಯೋಜನೆ, ಆಯುಷ್ಮಾನ್ ಕಾರ್ಡ್, ಉಜ್ವಲ, ವಿಮಾ ಯೋಜನೆ ದೇಶದ ಜನತೆಗೆ ತಲುಪಿದೆ ಎಂದು ಹೇಳಿದರು.
2 ವರ್ಷದಲ್ಲಿ 4.5 ಕೋಟಿ ಮನೆಗಳಿಗೆ ಕುಡಿಯುವ ನೀರು ತಲುಪಿದೆ. ವೈದ್ಯಕೀಯ ಶಿಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ.. ಮೆಡಿಕಲ್ ಸೀಟ್ಗಳನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.
ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೂ ಸಿದ್ಧತೆ ನಡೆಸಲಾಗಿದೆ. ಲಡಾಖ್ನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ವೇಗವಾಗಿ ನಡೆಯುತ್ತಿದೆ ಎಂದರು.
ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದ್ದು.ಹೃದಯ ಮೂಲಕವೂ ಈಶಾನ್ಯ ರಾಜ್ಯಗಳೊಂದಿಗೆ ಸಂಬಂಧ ಬೆಸೆಯಲಾಗುತ್ತಿದೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ