ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವಾಗ ಹಲವಾರು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ. 3800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.
ಕರಾವಳಿಯ ಅಭಿವೃದ್ಧಿಗಾಗಿ ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ ಹಾಗೂ ಉದ್ಯೋಗವನ್ನು ವೃದ್ಧಿಸುವ ಯೋಜನೆಗಳಾಗಿವೆ. ಕರ್ನಾಟಕಕ್ಕೆ 100 ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜೂರು ಮಾಡಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವೂ ಹಲವಾರು ಯೋಜನೆಗಳನ್ನು ಈ ಭಾಗಕ್ಕೆ ಜಾರಿ ಮಾಡಿದ್ದಾರೆ ಈ ಎಲ್ಲಾ ಯೋಜನೆಗಳಿಗೆ ಇಂದು ಚಾಲನೆ ದೊರೆಯಲಿದೆ ಎಂದರು.
ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ,ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment