Mandya

ಜೀವನ ಅನುಭವದ ಅಕ್ಷರ ರೂಪವೇ ಕವಿತೆಗಳು – ಡಾ. ಸುಜಾತ ಅಕ್ಕಿ

ಜೀವನಾನುಭವಗಳು ಕವಿತೆಗಳಾಗ ಬೇಕು ಜೊತೆಗೆ ಕವಿತೆಗಳು ಜೀವಂತಿಕೆಯ ರಸಾನುಭವ ಹೊಂದಿ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು ಎಂದು ಕವಿಯತ್ರಿ, ಚಿಂತಕಿ, ರಂಗತಜ್ಙೆ ಡಾ.ಸುಜಾತ ಅಕ್ಕಿ ಕವಿಗಳಿಗೆ ಕರೆ ನೀಡಿದರು.

ಕೆ.ಆರ್.ಪೇಟೆಯ ಶಿಕ್ಷಕರ ಭವನದ ಸಭಾಂಗಣದಲ್ಲಿ ನಡೆದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ನೇತೃತ್ವದಲ್ಲಿ ಮಕರ ಸಂಕ್ರಮಣದ ಅಂಗವಾಗಿ ಆಯೋಜಿಸಿದ್ದ ಸಂಕ್ರಾಂತಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಸುಜಾತ ಅಕ್ಕಿ
ಕನ್ನಡ ಸಾಹಿತ್ಯ, ಕನ್ನಡ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಚೆನ್ನಾಗಿ ಓದಿಕೊಂಡು ಸಾಹಿತ್ಯದ ಬಗ್ಗೆ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಂಡು ಯುವಜನರು ಕವಿತೆಗಳ ರಚನೆಗೆ ಮುಂದಾಗಬೇಕು ಎಂದರು.

ಕವಿತೆ ಬರೆಯುವುದಕ್ಕೂ ಮುನ್ನ ಹತ್ತಾರು ಬಾರಿ ಆಲೋಚಿಸಿ ನಮ್ಮ ಜೀವನದ ಅನುಭವಗಳು ಹಾಗೂ ನಮ್ಮ ಸುತ್ತಮುತ್ತ ನಡೆಯುವ ಘಟನೆಗಳ ಹೂರಣವನ್ನೇ ಪದಗಳನ್ನಾಗಿ ಜೋಡಿಸಿ ಅರ್ಥಪೂರ್ಣವಾಗಿ ಕವಿತೆಯನ್ನು ರಚಿಸಬೇಕು ಎಂದು ಕಿವಿಮಾತು ಹೇಳಿದರು

ಲೋಕದ ಸಾಮಾನ್ಯ ಜ್ಞಾನವನ್ನು ತಿಳಿದುಕೊಂಡು, ರೈತಾಪಿ ವರ್ಗ ಹಾಗೂ ಜನಸಾಮಾನ್ಯರ ನೋವು ನಲಿವುಗಳನ್ನು ಅಕ್ಷರಗಳ ರೂಪದಲ್ಲಿ ಹೊರತಂದರೆ ಆ ಕವಿತೆಗೆ ಹೆಚ್ಚಿನ ಅರ್ಥ ಬರುತ್ತದೆ. ಕವಿತೆಯ ಮೂಲ ಸಂದೇಶವು ಶ್ರೀಸಾಮಾನ್ಯನ ಹೃದಯವನ್ನು ತಟ್ಟುತ್ತದೆ ಎಂದು ಸುಜಾತಾ ಅಕ್ಕಿ ಹೇಳಿದರು.

.ಇಂದಿನ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ಯುವಜನರು, ಯುವತಿಯರು, ವಿದ್ಯಾರ್ಥಿಗಳು, ಸಾಹಿತಿಗಳು, ಶಿಕ್ಷಕರು, ರಂಗಕರ್ಮಿಗಳು ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ 27ಕ್ಕೂ ಹೆಚ್ಚಿನ ಕವಿಗಳು ಸಮಾಜದ ವಿವಿಧ ಸ್ತರಗಳ ಹೂರಣವನ್ನು ಅಭಿವ್ಯಕ್ತಪಡಿಸುವ ತಮ್ಮ ಸ್ವರಚಿತ ಕವನಗಳನ್ನು ಓದಿ ಎಲ್ಲರ ಮನ ಗೆದ್ದಿದ್ದಾರೆ ಎಂದು ಶ್ಲಾಘಿಸಿದರು..

ಕೃಷ್ಣರಾಜಪೇಟೆ ತಾಲ್ಲೂಕು ಕಸಾಪ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷೆ ಕೆ.ಮಂಜುಳಾ ಚನ್ನಕೇಶವ ಜ್ಯೋತಿ ಬೆಳಗಿಸಿ ಕವಿಗೋಷ್ಠಿಯನ್ನು ಉದ್ಘಾಟಿಸಿ ಎಳ್ಳು ಬೆಲ್ಲವನ್ನು ಅತಿಥಿಗಳಿಗೆ ಹಾಗೂ ಕವಿಗಳಿಗೆ ಹಂಚಿ ಕವಿಗೋಷ್ಠಿಗೆ ಶುಭ ಹಾರೈಸಿದರು.

ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ್, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಯುವ ಕವಿಯತ್ರಿ ಆರ್.ಎಂ.ಸಹನಾ, ತಾಲ್ಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಶಿಕ್ಷಣ ತಜ್ಞರಾದ ಶಿ.ಕುಮಾರಸ್ವಾಮಿ, ಕೆ.ಕಾಳೇಗೌಡ, ಆಚಾರ್ಯ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಸ್.ನಾಗೇಶಬಾಬೂ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಕವಿಯತ್ರಿ ಸವಿತಾರಮೇಶ್, ಕಸಾಪ ಸಂಚಾಲಕ ಕೆ.ಪಿ.ಬೋರೇಗೌಡ, ರೈತಮುಖಂಡರಾದ ಆರ್.ಎಸ್.ಮುಕುಂದ, ಕಸಾಪ ಪದಾಧಿಕಾರಿಗಳಾದ ಶೀಳನೆರೆ ಶಿವಕುಮಾರ್, ಜಿ.ಎಸ್.ಮಂಜು, ಸಾಹಿತಿಗಳಾದ ಡಾ.ನರಸಿಂಹರಾಜು, ಬಲ್ಲೇನಹಳ್ಳಿ ಮಂಜುನಾಥ್, ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ, ಪತ್ರಕರ್ತ ಆರ್.ಶ್ರೀನಿವಾಸ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024