ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ ಹಿರಿಯ ನಟ ಜಗ್ಗೇಶ್ ಒಂದು ಲಕ್ಷರೂ. ಬಹುಮಾನ ಘೋಷಿಸಿದ್ದಾರೆ.
ಮೈಸೂರಿನ ಅತ್ಯಾಚಾರ ಆರೋಪಿಗಳ ಬಂದಿಸಿದ ಪೋಲಿಸರಿಗೆ ಕಾರ್ಯದಕ್ಷತೆಗೆ ನನ್ನ ವೈಯಕ್ತಿಕ 1ಲಕ್ಷ ರೂ ಗಳ ಹಣದ ಚಕ್ ಗೃಹ ಮಂತ್ರಿಗಳು ಶ್ರೀ ಅರಗಜ್ನಾನೇಂದ್ರ ರಿಗೆ ಒಪ್ಪಿಸಿದೆ..
— ನವರಸನಾಯಕ ಜಗ್ಗೇಶ್ (@Jaggesh2) August 28, 2021
ಮೈಸೂರು ಪೋಲಿಸರಿಗೆ ಇರಲಿ ನಿಮ್ಮ ಬೆಂಬಲ ಪ್ರೋತ್ಸಾಹ..
ನಮ್ಮ ಮನೆಯ ಹೆಣ್ಣಂತೆ ಅಲ್ಲವೆ ಅನ್ಯಮಕ್ಕಳು ಕೂಡ…ಹರಿಃಓಂ pic.twitter.com/d8qLJFIaPw
ಈ ಬಗ್ಗೆ ಟ್ವೀಟ್ ಮಾಡಿರುವ “ನವರಸನಾಯಕ’ ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಆತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ಬಂಧಿಸಿರುವ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು.
ಆ್ಯಮ್ ಪ್ರೌಡ್ ಆಫ್ ಮೈ ಸ್ಟೇಟ್ ಪೊಲೀಸ್. ಪ್ರಕರಣ ಭೇದಿಸಿದ ನಲ್ಮೆಯ ಪೊಲೀಸರಿಗೆ ನನ್ನ ಕಡೆಯಿಂದ ಒಂದು ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ!ರಾಷ್ಟ್ರಕ್ಕೆಕ್ಕೆ ಮಾದರಿ ನಮ್ಮ ಪೊಲೀಸ್, ಎಂದು ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು