ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಸೇರಿದಂತೆ ಸಾರ್ವಜನಿಕರ ಸುರಕ್ಷತೆಗೆ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಜಾರಿ ಮಾಡಲಾದ ನಿಯಮಗಳು:
ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ಮಾಡಬಾರದು. ಇದಕ್ಕಾಗಿ ಠಾಣಾವಾರು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದೆ.
ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಿಂಕ್ ಗರುಡಾ ಪಡೆ (ಚಾಮುಂಡೆ ಪಡೆ) ಗಸ್ತು ನಿಯೋಜನೆ.
ಯಾವುದೇ ಅಹಿತಕರ ಘಟನೆಗೆ ತಕ್ಷಣ ಸ್ಪಂದಿಸಲು ಶ್ವಾನದಳ ಮತ್ತು ವಿದ್ವಂಸಕ ಕೃತ್ಯ ತಡೆ ತಂಡ ಸಜ್ಜಾಗಿದೆ.
ಪ್ರವಾಸಿ ತಾಣಗಳಲ್ಲಿ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ.
ವೀಲೀಂಗ್ ಮತ್ತು ಡ್ರಾಗ್ ರೇಸ್ಗಳ ತಡೆಯಿಗೆ ಸಂಚಾರ ಪೊಲೀಸ್ ತಂಡ ಸಜ್ಜಾಗಿದೆ.
ಅತಿವೇಗದ ವಾಹನ ಚಾಲನೆ ನಿಯಂತ್ರಣಕ್ಕೆ ಚೆಕ್ಪೋಸ್ಟ್ಗಳನ್ನು ತೆರೆಯಲಾಗುತ್ತದೆ. 112 ಮತ್ತು ಹೆದ್ದಾರಿ ಪೆಟ್ರೋಲ್ ವಾಹನಗಳ ನಿಯೋಜನೆ.
ಹೋಟೆಲ್, ರೆಸ್ಟೋರೆಂಟ್, ಕ್ಲಬ್ಗಳಲ್ಲಿ ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅನುಮತಿ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು