Karnataka

ಶ್ರೀರಂಗಪಟ್ಟಣದಲ್ಲಿ ಪತ್ರಕರ್ತರ ಮೇಲೆ ಪೊಲೀಸರ ದರ್ಪ : ಮೈಸೂರು – ಬೆಳ್ತಂಗಡಿಯಲ್ಲಿ ಕಾರ್ಯಕರ್ತರ ಗಲಾಟೆ

ಶ್ರೀರಂಗಪಟ್ಟಣದಲ್ಲಿ ಪತ್ರಕರ್ತರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ನಾಮಪತ್ರ ಸಲ್ಲಿಕೆ ವೇಳೆ ಪೊಲೀಸರು ಗೂಂಡಾಗಿರಿ ವರ್ತನೆ ನಡೆಸಿದ್ದಾರೆ.

ಚುನಾವಣಾ ಕಚೇರಿಯಿಂದ ಹೊರಬರುವಾಗ ಮಾಧ್ಯಮ ಪ್ತತಿನಿಧಿಗಳನ್ನು ತಳ್ಳಿದ ಪೊಲೀಸರು ಗೂಂಡಾವರ್ತನೆ ತೋರಿಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ :

ಮೈಸೂರು ಜಿಲ್ಲೆಯಹೆಚ್ ಡಿ ಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪೊಲೀಸರಿಂದ ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಬೆಳ್ತಂಗಡಿಯಲ್ಲೂ ಗಲಾಟೆ

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬಿಜೆಪಿ ಕಾಂಗ್ರೆಸ್ ನಾಮಪತ್ರ ಸಲ್ಲಿಕೆಯ ವೇಳೆ ಸಂಘರ್ಷ ಉಂಟಾಗಿದೆ, ರ್ಯಾಲಿ ವೇಳೆಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಫೋಷಣೆ ಕೂಗಿ ಗಲಾಟೆ ನಡೆಯಿತು.ಇಂದು ಬೆಳಗ್ಗೆ ಕುತ್ಯಾರು ದೇವಸ್ಥಾನದಿಂದ ಬಿಜೆಪಿಯ ಅಭ್ಯರ್ಥಿ ಹರೀಶ್ ಪೂಂಜಾ ತಂಡ ಬೃಹತ್ ಮೆರವಣಿಯೊಂದಿಗೆ ಮಿನಿ ವಿಧಾನಸೌಧಕ್ಕೆ ಸಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆನಂತರ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಮನೆಗೆ ಹಿಂತಿರುಗುತ್ತಿದ್ದರು.

ಅಷ್ಟರಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮತ್ತು ಇತರ ಮುಖಂಡರುಗಳು ನಾಮಪತ್ರ ಸಲ್ಲಿಕೆ ಮಾಡಲು .ಕಿನ್ಯಮ್ಮ ಯಾನೆ ಸಭಾಂಗಣದಿಂದ ಶುರುವಾಗಿತ್ತು ಮಾರ್ಗಮಧ್ಯೆ, ಮಾಜಿ ಶಾಸಕ ವಸಂತ ಬಂಗೇರ ಅವರ ಮನೆಯ ಮುಂದಿನ ರಸ್ತೆಯಲ್ಲಿ ಬಿಜೆಪಿ & ಕಾಂಗ್ರೆಸ್ ಕಾರ್ಯಕರ್ತರು ವಾಹನಗಳ ಮೂಲಕ ಸಾಗುತ್ತಿದ್ದರು.

ಆಗ ಪರಸ್ಪರ ಘೋಷಣೆಗಳು ಕೂಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದ ವಾಹನಕ್ಕೆ ಹಾನಿ, ಬಿಜೆಪಿ ಕಾರ್ಯಕರ್ತ ಕಾರಿನ ಗಾಜು ಪುಡಿಪುಡಿ ಮಾಡಲಾಗಿದೆ ಎಂದು ವರದಿಯಾಗಿದೆ.ಸ್ವಾಭಿಮಾನಕ್ಕೆ ಧಕ್ಕೆಯಾದವರು ಕಾಂಗ್ರೆಸ್‌ಗೆ ಸೇರ್ತಾರೆ : ಡಿಕೆಶಿ

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024