ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 85 ಲಕ್ಷ ರೂ. ಹಣವನ್ನು ಪೊಲೀಸರು ಜೀವದ ಹಂಗು ತೊರೆದು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದಿದೆ.
ಅಕ್ರಮವಾಗಿ ಹಣವನ್ನು ಸಾಗಾಣಿಕೆ ಮಾಡುತ್ತಿದ್ದ ಖದೀಮರು ಪೊಲೀಸರನ್ನು ಕಂಡು ಕಾರನ್ನು ಸ್ಪೀಡ್ ಆಗಿ ಓಡಿಸಿದ್ದಾರೆ.ಪಾಂಡವಪುರದಲ್ಲಿ ಉಚಿತ ಗಣೇಶನಿಗಾಗಿ ಮುಗಿಬಿದ್ದ ಯುವಕರು
ಬಳಿಕ ಕಾರ್ ಹಿಂದೆ ಓಡಿ ಹೋಗಿ ಕೆಳಕ್ಕೆ ಬಿದ್ದರೂ ಅವರನ್ನು ಬಿಡದೇ ಪೊಲೀಸರು ಚೇಜ್ ಮಾಡಿ, ಕಾರನ್ನು ನಿಲ್ಲಿಸಿದ್ದಾರೆ.
ಆರೋಪಿಗಳಾದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ನಿಜ್ಜೂರು ಗ್ರಾಮದ ಫಯಾಜಖಾನ್(31), ಇಮ್ರಾನ್ ಖಾನ್(27) ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್(23) ಮತ್ತು ಸಯ್ಯದ ಅಮೀನ್(29)ನನ್ನು ಪೊಲೀರು ಬಂಧಿಸಿದ್ದಾರೆ.
ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಅಕ್ರಮವಾಗಿ ಹಣ ಸಾಗಾಣಿಕೆ ಮಾಡುತ್ತಿದ್ದರು ಎನ್ನಲಾಗಿದೆ.
ಪೊಲೀಸರು ಕಾರಿನ ಬ್ಯಾಗಿನಲ್ಲಿ ತುಂಬಿಟ್ಟ 500, 200, 100 ಹಾಗೂ 50 ರೂ. ಮುಖಬೆಲೆಯ ಒಟ್ಟು 85 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.
ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳನ್ನು ಹಿಡಿಯಲು ಹಾನಗಲ್ ಸಿಪಿಐ ಶಿವಶಂಕರ್ ಗಣಾಚಾರಿ ಹಾಗೂ ಪಿಎಸ್ಐ ಶ್ರೀಶೈಲ ಪಟ್ಟಣ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಎಸ್ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ.
- ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟ ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು
- ಹೆಚ್ ಡಿ ಕೋಟೆ ಬಳಿ : ನಾಲೆಗೆ ಬಿದ್ದ ಪುತ್ರಿ ರಕ್ಷಣೆಗೆ ಹೋದ ಅಪ್ಪ – ಅಮ್ಮನೂ ದುರಂತ ಸಾವು
- ಅಂತರರಾಷ್ಟ್ರೀಯ ಕಾಫಿ ದಿನ | International Coffee Day 2023