ರಾಜ್ಯದಲ್ಲಿ ಐದು ವರ್ಷದೊಳಗಿನ 60 ಲಕ್ಷ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಲಾಗುತ್ತಿದೆ. ಸಿಬ್ಬಂದಿ ಅಗತ್ಯತೆ ಇರುವುದರಿಂದ ಈ ನಾಲ್ಕು ದಿನ ಕೋವಿಡ್ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪೋಷಕರು ಎಷ್ಟು ಬಾರಿ ಲಸಿಕೆ ಹಾಕಿಸಿದರೂ ಮತ್ತೆ ಲಸಿಕೆ ಹಾಕಿಸಬೇಕು. ಕೆಲವೆಡೆ ಮೊಬೈಲ್ ಘಟಕದ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಳೆದ 11 ವರ್ಷದಲ್ಲಿ ಹೊಸ ಪೋಲಿಯೋ ಪ್ರಕರಣ ದಾಖಲಾಗಿಲ್ಲ. ಆದರೆ ಪಾಕಿಸ್ತಾನ, ಅಫ್ಘನಿಸ್ತಾನ ದೇಶಗಳಲ್ಲಿ ಈ ರೋಗ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
ಕೋವಿಡ್ ಬಂದ ಬಳಿಕ ಆರ್ಥಿಕ ಸಂಕಷ್ಟ ಉಂಟಾಗಿದೆ. ಇಂತಹ ಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸದೃಢ ದೇಶ ನಿರ್ಮಿಸುತ್ತಿದ್ದಾರೆ. ಈ ಬಾರಿ ಬಿಡುಗಡೆಯಾದ ಆರ್ಥಿಕ ಸಮೀಕ್ಷೆಯಲ್ಲಿ ಆಶಾದಾಯಕ ಅಂಶಗಳು ಕಂಡುಬಂದಿವೆ. ಈ ಬಾರಿ ಆಶಾದಾಯಕವಾದ ಬಜೆಟ್ ಮಂಡನೆಯಾಗಲಿದೆ. ಮುಂದಿನ ವರ್ಷದಲ್ಲಿ ಆರ್ಥಿಕ ಚೇತರಿಕೆಯ ವೇಗ ಹೆಚ್ಚಲಿದೆ ಎಂದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ