ನನ್ನ ಅನುಭವದ ಆಧಾರದ ಮೇಲೆ ಹೇಳುತ್ತಿದ್ದೇನೆ ರಾಜ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವುದು ನಿಶ್ಚಿತ. ಒಂದು ವೇಳೆ ಸಿಎಂ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.ಇಂದಿನಿಂದ ಜ.30 ರವರೆಗೆ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ
ಜೆಡಿಎಸ್ ರಾಜ್ಯಾಧ್ಯಕ್ಷ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ಮರದ ಎರಡು ಹಕ್ಕಿಗಳು. ಕಾಂಗ್ರೆಸ್, ಬಿಜೆಪಿ ನಾಯಕರು ಜೈಲಿಗೆ ಹೋಗಿ ಬಂದಿದ್ದಾರೆ. ನಮ್ಮ ನಾಯಕರು ಜೈಲಿನಲ್ಲಿಲ್ಲ, ಬೇಲ್ ಮೇಲೆ ಹೊರಬಂದಿಲ್ಲ. ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದವರು ಜನರನ್ನು ಕರೆಸುತ್ತಾರೆ. ಜನ ಇದ್ದಲ್ಲಿಗೆ ನಾವು ಹೋಗುತ್ತಿದ್ದೇವೆ. ಕಾಂಗ್ರೆಸ್ನವರು ಹವಾನಿಯಂತ್ರಿತ ಬಸ್ನಲ್ಲಿ ತಿರುಗುತ್ತಿದ್ದಾರೆ. ಬಿಜೆಪಿ ನಾಯಕರು ಹೆಲಿಕಾಪ್ಟರ್ ಮೂಲಕ ತಿರುಗಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿಯವರಿಗೆ ಬರೀ ಸಿಡಿಗಳು ಮಾತ್ರ ಬೇಕಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಕ್ಕೆ ವ್ಯತ್ಯಾಸ ಇದೆ. ಡಿ.ಕೆ. ಶಿವಕುಮಾರ್ ಅವರೆ ಕುಮಾರಸ್ವಾಮಿ ಸರ್ಕಾರ ಬಿಳಿಸಿದವರು ಯಾರು ಎಂದು ಪ್ರಶ್ನಿಸಿದರು. ಬಹಿರಂಗ ಚರ್ಚೆಗೆ ಬರೋದಾದ್ರೆ ಬನ್ನಿ ಎಂದು ಸವಾಲು ಹಾಕಿದರು.
ಶಿವರಾಜ್ ಪಾಟೀಲ್ರನ್ನು ಟೋಪಿವಾಲಾ ಎಂದ ಕುಮಾರಸ್ವಾಮಿ
ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಮತ್ತೆ JDS ಸೇರ್ಪಡೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಶಿವರಾಜ್ ಪಾಟೀಲ್ ಟೋಪಿವಾಲಾ. 2013ರಲ್ಲಿ ರಾಯಚೂರು ಕ್ಷೇತ್ರದಲ್ಲಿ ಐವರು ಅಭ್ಯರ್ಥಿಗಳಿದ್ದರು. ಏನೋ ಡಾಕ್ಟರ್ ಅಂತಾ ಶಿವರಾಜ್ ಪಾಟೀಲ್ಗೆ ಟಿಕೆಟ್ ಕೊಟ್ಟಿದ್ದೆ. ಒಮ್ಮೆ ಟೋಪಿ ಹಾಕಿ ಆಗಿದೆ. ಈಗ ಮತ್ತೊಮ್ಮೆ ಹಾಕಿಸಿಕೊಳ್ಳಲಾ ಎಂದು ವಾಗ್ದಾಳಿ ಮಾಡಿದರು.
ಪ್ರಜ್ವಲ್ ರೇವಣ್ಣ ಹೇಳಿಕೆಗೆ ಕುಮಾರಸ್ವಾಮಿ ಮಾರ್ಮಿಕ ಉತ್ತರ
ಬಿಫಾರ್ಮ್ ಕೊಡುವುದು ಹೆಚ್.ಡಿ.ದೇವೇಗೌಡರೇ. ಆದರೆ ಬಿ ಫಾರ್ಮ್ಗೆ ಸಹಿ ಹಾಕೋದು ಯಾರು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಬಿ ಫಾರ್ಮ್ಗೆ ಸಹಿ ಮಾಡುವುದು ಕೂಡ H.D.ದೇವೇಗೌಡರೇ. ಅಂತಿಮವಾಗಿ ಪಕ್ಷದ ಸಂಸದೀಯ ಮಂಡಳಿ ತೀರ್ಮಾನಿಸಲಿದೆ. ಪಕ್ಷದ ನಾಯಕರು ಅಂತಿಮವಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಂಸದೆ ಸುಮಲತಾ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
ತಮ್ಮ ಮೂಲಕ ಡಿಕೆಶಿ, ಹೆಚ್ಡಿಕೆ ಪಬ್ಲಿಸಿಟಿ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಸದೆ ಸುಮಲತಾ ಹೇಳಿಕೆಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಸಂಸದೆ ಸುಮಲತಾ ಬಗ್ಗೆ ಮಾತನಾಡುವಷ್ಟು ದೊಡ್ಡವನಾ ನಾನು. ಅಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಮಾರ್ಮಿಕವಾಗಿ ನುಡಿದರು. ಅವರು ಆಕಾಶದಲ್ಲಿರೋರು, ನಾನು ಭೂಮಿಯಲ್ಲಿರೋನು. ಅವರ ಬಗ್ಗೆ ಮಾತನಾಡಿ ನಾನು ಪಬ್ಲಿಸಿಟಿ ತೆಗೆದುಕೊಳ್ಳಲು ಆಗುತ್ತಾ. ಅವರ ಬಗ್ಗೆ ನಾನ್ಯಾಕೆ ಚರ್ಚೆ ಮಾಡಲಿ, ಅಂತಹ ಯೋಗ್ಯತೆ ನನಗಿಲ್ಲ ಎಂದು ಹೇಳಿದರು.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment