ಚುನಾವಣೆಗೆ ಮೂರು ತಿಂಗಳು ಇರುವಂತೆ ಅಲ್ಪಮತಕ್ಕೆ ಕುಸಿದಿರುವ ಪಾಂಡಿಚೇರಿ ಕಾಂಗ್ರೆಸ್ ಸರ್ಕಾರ ಪತನವಾಗೋದು ಬಹುತೇಕ ನಿಶ್ಚಿತವಾಗಿದೆ.
ಬಹುಮತ ಸಾಬೀತುಪಡಿಸಲು ಕಾಂಗ್ರೆಸ್ ಮುಂದಾಗಿರುವ ಹೊತ್ತಲ್ಲೇ ನಿನ್ನೆ ಮತ್ತೊಬ್ಬ ಕೈ ಶಾಸಕನ ರಾಜೀನಾಮೆ ಶಾಕ್ ನೀಡಿದೆ. ಇದೆಲ್ಲದರ ನಡುವೆ ಇಂದು ಸಂಜೆ ಸಿಎಂ ನಾರಾಯಣಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ.
ಡಿಎಂಕೆ ಹಾಗೂ ಪಕ್ಷೇತರ ಶಾಸಕರ ಬೆಂಬಲದಿಂದ ಪುದುಚೆರಿ ಸರ್ಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ಗೆ ಇದುವರೆಗೂ 5 ಶಾಸಕರು ರಾಜೀನಾಮೆ ನೀಡುವುದರ ಮೂಲಕ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.
3 ನಾಮನಿರ್ದೇಶಿತರು ಸೇರಿ ಪುದುಚೆರಿ ವಿಧಾನಸಭೆಯ ಒಟ್ಟು ಸದಸ್ಯ ಬಲ 33 ಆಗಿದೆ. 1 ಪಕ್ಷೇತರ, 3 ಡಿಎಂಕೆ, 15 ಕಾಂಗ್ರೆಸ್, 14 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಡಿಎಂಕೆ ಜೊತೆ ಮೈತ್ರಿ ಹಾಗೂ ಪಕ್ಷೇತರರ ಬೆಂಬಲದಿಂದ ಕಾಂಗ್ರೆಸ್ 19 ಸದಸ್ಯರೊಂದಿಗೆ ಪುದುಚೇರಿಯ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.
19 ಸದಸ್ಯರ ಬಲದಿಂದ ನಾಲ್ಕು ಮುಕ್ಕಾಲು ವರ್ಷ ಅಧಿಕಾರ ಪೂರೈಸಿರುವ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೆ 3 ತಿಂಗಳು ಇರುವಂತೆಯೇ ಸದ್ಯ ಅಲ್ಪಮತಕ್ಕೆ ಕುಸಿದಿದೆ. ಸರ್ಕಾರ ಅಲ್ಪಮತಕ್ಕೆ ಕುಸಿಯಲು ಕಾರಣಗಳನ್ನು ನೋಡುವುದಾರೇ, ಕಾಂಗ್ರೆಸ್ನ ಓರ್ವ ಶಾಸಕನನ್ನು ಅಮಾನತು ಮಾಡಲಾಗಿದ್ದು, 5 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ 13 ಸದಸ್ಯರೊಂದಿಗೆ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ರಾಜ್ಯ ವಿಧಾನಸಭೆಯ ಸದಸ್ಯ ಬಲ 27ಕ್ಕೆ ಇಳಿಕೆಯಾಗಿದೆ.
ಪುದುಚೆರಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಡೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವ ನಾಯಕರು ಬಿಜೆಪಿಯತ್ತ ಮುಖಮಾಡಿದ್ದಾರೆ.
ಬಹುಮತ ಸಾಬೀತುಪಡಿಸಲು ಸಿಎಂಗೆ ರಾಜ್ಯಪಾಲರ ಸೂಚನೆ
ಕಾಂಗ್ರೆಸ್ ಸರ್ಕಾರ ಬಹುಮತ ಸಾಬೀತುಪಡಿಸಲು ವಿಶೇಷ ಅಧಿವೇಶನ ಕರೆಯುವಂತೆ ವಿಪಕ್ಷ ಮಾಡಿದ್ದ ಮನವಿಗೆ ರಾಜ್ಯಪಾಲರು ಸ್ಪಂದಿಸಿದ್ದಾರೆ. ಇಂದು ಸಂಜೆಯೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲೆ ತಮಿಳಿಸಾಯಿ ಸುಂದರರಾಜನ್ ಸಿಎಂ ವಿ. ನಾರಾಯಣಸ್ವಾಮಿ ಅವರಿಗೆ ಸೂಚನೆ ನೀಡಿದ್ದಾರೆ.
ಇಂದು ವಿಶ್ವಾಸಮತ
ಇಂದು ಸಂಜೆ 5 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಯಲಿದೆ. ಕಾಂಗ್ರೆಸ್ ಮೈತ್ರಿಕೂಟದಲ್ಲಿ 13, ಬಿಜೆಪಿಯಲ್ಲಿ 14 ಮಂದಿ ಸದಸ್ಯ ಬಲ ಇದೆ. ಬಹುಮತಕ್ಕೆ ಕಾಂಗ್ರೆಸ್ಗೆ 14 ಸದಸ್ಯರ ಬೆಂಬಲ ಅಗತ್ಯವಿದೆ. ಮುಖ್ಯಮಂತ್ರಿ ವಿ. ನಾರಾಯಣಸಾಮಿ ವಿಶ್ವಾಸಮತ ಯಾಚಿಸಲಿದ್ದಾರೆ. ಬಹುಮತ ಸಾಬೀತುಪಡಿಸುವಲ್ಲಿ ಕಾಂಗ್ರೆಸ್ ವಿಫಲವಾದರೆ ಬಿಜೆಪಿಗೂ ಗದ್ದುಗೆ ಸಿಗಲ್ಲ. ಏಕೆಂದರೆ ಚುನಾವಣೆಗೆ 3 ತಿಂಗಳಷ್ಟೇ ಇದೆ. ಮುಂದಿನ ಮೂರು ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ಜಾರಿಗೆ ಬರುವ ಸಾಧ್ಯತೆ ಇದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment