ಭಾರತ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಸ್ಟಾರ್ ರಿಹಾನ್ನ ಬೆಂಬಲ ನೀಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ರಿಹಾನ್ನ ಅಂತಾರಾಷ್ಟ್ರೀಯ ಮಾಧ್ಯಮವೊಂದು ರೈತರ ಪ್ರತಿಭಟನೆಯ ಕುರಿತು ವರದಿ ಮಾಡಿರುವುದನ್ನು ಉಲ್ಲೇಖಿಸಿದ್ದಾರೆ. ನಾವ್ಯಾಕೆ ಇದರ ಬಗ್ಗೆ ಮಾತಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರ್ಯೂಡೂ ಸಹ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಇನ್ನು ಬಾಲಿವುಡ್ ಹಲವು ನಟ ನಟಿಯರೂ ಸಹ ಟ್ವೀಟ್ ಮಾಡುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು.
ಯೂ ಫೂಲ್ – ಕಂಗಾನ , ರಿಹಾನ್ನ ಟಾಂಗ್ :
ಕೃಷಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅಂತರಾಷ್ಟ್ರೀಯ ಪಾಪ್ ಸ್ಟಾರ್ ರಿಹಾನ್ನ ಬೆಂಬಲ ಸೂಚಿಸಿದ್ದಕ್ಕೆ. ಇತ್ತ ಬಾಲಿವುಡ್ ನಟಿ ಕಂಗನಾ ಕೆಂಡವಾಗಿದ್ದಾರೆ.

ರೈತರ ಪ್ರತಿಭಟನೆ ಬಗ್ಗೆ ನಾವ್ಯಾಕೆ ಇದರ ಬಗ್ಗೆ ಮಾತನಾಡುತ್ತಿಲ್ಲ ಎಂಬ ರಿಹಾನ್ನರ ಟ್ವೀಟ್ಗೆ, ಪ್ರತಿಯಾಗಿ ಟ್ವಿಟ್ ಮಾಡಿರುವ ಕಂಗನಾ, ಯಾರೂ ಇದರ ಬಗ್ಗೆ ಮಾತನಾಡುತ್ತಿಲ್ಲ, ಏಕೆಂದರೆ ಅವರೆಲ್ಲಾ ರೈತರಲ್ಲ. ಭಾರತವನ್ನು ಇಬ್ಭಾಗ ಮಾಡಲು ನೋಡುತ್ತಿರುವ ಭಯೋತ್ಪಾದಕರು. ಅದರಿಂದ ದುರ್ಬಲಗೊಳ್ಳುವ ಭಾರತವನ್ನು ಚೀನಾ ವಶಕ್ಕೆ ಪಡೆದು ಅಮೆರಿಕಾದಂತೆಯೇ ಚೈನೀಸ್ ಕಾಲೋನಿ ಕಟ್ಟಲು ನೆರವಾಗುತ್ತಿರುವವರು. ಸಿಟ್ ಡೌನ್ ಯೂ ಫೂಲ್.. ನಾವು ನಿಮ್ಮ ರೀತಿ ನಮ್ಮ ದೇಶವನ್ನು ಮಾರಲ್ಲ ಅಂತ ಟ್ವೀಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು