ನವೆಂಬರ್ 23 ರಿಂದ ತಹಶೀಲ್ದಾರ್ ಕಚೇರಿ ಮುಂಭಾಗ ಆರಂಭಿಸಲು ಉದ್ದೇಶಿಸಿದ್ದ ಬೂದನೂರು ಗ್ರಾಮ ಪಂಚಾಯತಿ ನಿವೇಶನರಹಿತರ ಅಹೋರಾತ್ರಿ ಪ್ರತಿಭಟನೆಯನ್ನು ಅಧಿಕಾರಿಗಳ ಭರವಸೆ ಮೇರೆಗೆ ಡಿ.1ಕ್ಕೆ ಮುಂದೂಡಲಾಗಿದೆ
ಸ್ವಂತಮನೆ ನಮ್ಮಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶ ಈ ಈ ವಿಷಯ ತಿಳಿಸಿ, ತಾಲೂಕು ಆಡಳಿತ ಬಡ/ನಿರ್ಗತಿಕ ವಿರೋಧಿ ನೀತಿ ಬಿಟ್ಟು ಕಾನೂನಾತ್ಮಕವಾಗಿ ಭೂಮಿ ಮಂಜೂರು ಮಾಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಪುನರುಚ್ಚರಿಸಿದರು.
ಬೂದನೂರು ಗ್ರಾಮದ ಸರ್ವೇ ನಂ.190ರಲ್ಲಿ ದಾಖಲೆ ಇಲ್ಲದೆ ಒತ್ತುವರಿಗೊಂಡಿರುವ ಭೂಮಿಯನ್ನು ಸರ್ಕಾರಿ ಭೂಮಿ ಎಂದು ನಮೂದಿಸದೆ ಒತ್ತುವರಿದಾರರ ಹೆಸರು ನಮೂದಿಸಿ ಕಬಳಿಕೆಗೆ ತಾಲ್ಲೂಕು ಆಡಳಿತವೇ ಕುಮ್ಮಕ್ಕು ನೀಡಿ ದಲಿತ ಹಾಗೂ ಹಿಂದೂಳಿದ ವರ್ಗದ ಬಡವರನ್ನು ವಂಚಿಸಲಾಗುತ್ತಿದೆ ಎಂದರು.
ನಂ.54, 57 ಹಾಕಲು ಇರಬೇಕಾದ ಅರ್ಹತೆಗಳೇ ಇಲ್ಲದವರಿಗೆ ಆಯ್ಕೆಗೆ ಮೊದಲೇ ಖುಷ್ಕಿ ಭೂಮಿ ಕಬಳಿಸಲು ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರು ಮುಂದಾಗಿದ್ದು ಸದರಿ ಅಧಿಕಾರಿಗಳನ್ನು ಅಮಾನತುಪಡಿಸಲು ಆಗ್ರಹಿಸಿದರು.
ಈ ಸಭೆಯಲ್ಲಿ ಸವಿತಾ, ಕಾಮಾಕ್ಷಿ, ಸುಧಾ, ಭದ್ರಯ್ಯ, ವಿಕಲಚೇತನ ಗೋಪಾಲ್, ಸುಮತಿಕಾರ್ತಿಕ್, ಎಲ್ಲಮ್ಮ ಇದ್ದರು
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
This website uses cookies.
Leave a Comment