ಚುನಾವಣೆ ಪ್ರಚಾರಕ್ಕೆಂದೇ ಹೊಸ ವಾಹನ ಖರೀದಿ ಮಾಡಿ ನಂತರ , ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿದರು.
ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾಮಪತ್ರ ಸಲ್ಲಿಕೆ ದಿನ ರಾಹು ಕಾಲ ಇದ್ರೇ ಮಾಡಿಯೇ ಮಾಡುತ್ತೇವೆ. ಏಪ್ರಿಲ್ 11 ರಿಂದ 20ರವರೆಗೆ ನಾಮಪತ್ರ ಸಲ್ಲಿಕೆ ದಿನವಾಗಿದೆ. ದಿನವೂ ರಾಹುಕಾಲ ಇರುತ್ತೆ, ಆ ಸಮಯದಲ್ಲಿ ನಾಮಪತ್ರ ಸಲ್ಲಿಸುತ್ತೇವೆ ಎಂದರು
ಚುನಾವಣೆ ಪ್ರಚಾರಕ್ಕೆ ಎಂದೇ ಹೊಸ ವಾಹನ ತಂದಿದ್ದೇವೆ. ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ. ಎರಡು – ಮೂರು ದಿನಗಳಲ್ಲಿ ಸ್ಮಶಾನದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು.
ನಾವು ಮಾಡುವುದು ಸಂಪ್ರದಾಯ ವಿರೋಧಿ ಆಗಲ್ಲ, ನಮ್ಮ ವಿಚಾರ ಅದು. ಈ ಕೆಲಸ ಇವತ್ತು ಮಾಡುತ್ತಿಲ್ಲ. ಕಳೆದ ಮೂವತ್ತು ವರ್ಷಗಳಿಂದಲೂ ಮಾಡುತ್ತಿದ್ದೇವೆ. ನಾವು ಹೋಗುತ್ತಿರುವ ದಾರಿಯನ್ನು ಬುದ್ದ, ಬಸವಣ್ಣ, ಅಂಬೇಡ್ಕರ್ ತೋರಿಸಿದ್ದಾರೆ. ನಮ್ಮ ಆಯ್ಕೆ ನಮಗೆ ಬಿಡಿ, ಹೀಗೆ ಮಾಡಿ ಅಂದ್ರೇ ಆಗುವುದಿಲ್ಲ.
ಈ ಸಲ ಯಮಕನಮರಡಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗುತ್ತೇನೆ. ಇಲ್ಲವಾದ್ರೇ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಾರೆ. ಅತಿಹೆಚ್ಚು ಅಂತರದಿಂದ ಗೆಲ್ಲಿಸಬೇಕೆಂಬುದು ಆಶಯ ಎಂದರು.ಇದನ್ನು ಓದಿ –ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರಸಿಕೆರೆ ಶಿವಲಿಂಗೇಗೌಡ- ಕಾಂಗ್ರೆಸ್ ನಿಂದ ಸ್ಪರ್ಧೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು