ಚುನಾವಣೆ ಪ್ರಚಾರಕ್ಕೆಂದೇ ಹೊಸ ವಾಹನ ಖರೀದಿ ಮಾಡಿ ನಂತರ , ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿದರು.
ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾಮಪತ್ರ ಸಲ್ಲಿಕೆ ದಿನ ರಾಹು ಕಾಲ ಇದ್ರೇ ಮಾಡಿಯೇ ಮಾಡುತ್ತೇವೆ. ಏಪ್ರಿಲ್ 11 ರಿಂದ 20ರವರೆಗೆ ನಾಮಪತ್ರ ಸಲ್ಲಿಕೆ ದಿನವಾಗಿದೆ. ದಿನವೂ ರಾಹುಕಾಲ ಇರುತ್ತೆ, ಆ ಸಮಯದಲ್ಲಿ ನಾಮಪತ್ರ ಸಲ್ಲಿಸುತ್ತೇವೆ ಎಂದರು
ಚುನಾವಣೆ ಪ್ರಚಾರಕ್ಕೆ ಎಂದೇ ಹೊಸ ವಾಹನ ತಂದಿದ್ದೇವೆ. ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ. ಎರಡು – ಮೂರು ದಿನಗಳಲ್ಲಿ ಸ್ಮಶಾನದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು.
ನಾವು ಮಾಡುವುದು ಸಂಪ್ರದಾಯ ವಿರೋಧಿ ಆಗಲ್ಲ, ನಮ್ಮ ವಿಚಾರ ಅದು. ಈ ಕೆಲಸ ಇವತ್ತು ಮಾಡುತ್ತಿಲ್ಲ. ಕಳೆದ ಮೂವತ್ತು ವರ್ಷಗಳಿಂದಲೂ ಮಾಡುತ್ತಿದ್ದೇವೆ. ನಾವು ಹೋಗುತ್ತಿರುವ ದಾರಿಯನ್ನು ಬುದ್ದ, ಬಸವಣ್ಣ, ಅಂಬೇಡ್ಕರ್ ತೋರಿಸಿದ್ದಾರೆ. ನಮ್ಮ ಆಯ್ಕೆ ನಮಗೆ ಬಿಡಿ, ಹೀಗೆ ಮಾಡಿ ಅಂದ್ರೇ ಆಗುವುದಿಲ್ಲ.
ಈ ಸಲ ಯಮಕನಮರಡಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗುತ್ತೇನೆ. ಇಲ್ಲವಾದ್ರೇ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಾರೆ. ಅತಿಹೆಚ್ಚು ಅಂತರದಿಂದ ಗೆಲ್ಲಿಸಬೇಕೆಂಬುದು ಆಶಯ ಎಂದರು.ಇದನ್ನು ಓದಿ –ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರಸಿಕೆರೆ ಶಿವಲಿಂಗೇಗೌಡ- ಕಾಂಗ್ರೆಸ್ ನಿಂದ ಸ್ಪರ್ಧೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ