Karnataka

ಮನೆಯಲ್ಲಿ ಭಗತ್ ಸಿಂಗ್ ಪಾತ್ರದ ಅಭ್ಯಾಸ – ನೇಣಿಗೆ ಕೊರಳು, ಬಾಲಕ ಸಾವು – ಚಿತ್ರದುರ್ಗದಲ್ಲಿ ದುರಂತ

ಭಗತ್ ಸಿಂಗ್ ಪಾತ್ರವನ್ನು ಅಭ್ಯಾಸ ಮಾಡುತ್ತಿದ್ದ ವೇಳೆ ನಿಜವಾಗಿಯೂ ಬಾಲಕ ನೇಣಿಗೀಡಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.


ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಸಿದ್ಧತೆ ನಡೆಸುತ್ತಿದ್ದ ವೇಳೆ ಬಾಲಕ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ – ಕಣ್ಣೂರು ಶ್ರೀ, ಯುವತಿಯ ಬಂಧನ

ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎನ್ನಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಗಾಂಧಿಜಯಂತಿ, ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸಣ್ಣ ಮಕ್ಕಳು ದೇಶಕ್ಕಾಗಿ ಹೋರಾಡಿದ ವೀರ ಮಹಾನಿಯರ ವೇಷಧರಿಸಿ ನಾಟಕ, ನೃತ್ಯ, ಭಾಷಣ ಮಾಡುವುದನ್ನು ಶಾಲೆಗಳಲ್ಲಿ ನಾವು ನೋಡಿರುತ್ತೇವೆ.

ಎಸ್‌ಎಲ್‌ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಭಾರೀ ಸಿದ್ಧತೆ ನಡೆಸುತ್ತಿದ್ದ, ಮನೆಗೆ ಬಂದ ಬಳಿಕವೂ ಶನಿವಾರ ರಿಹರ್ಸಲ್‌ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.

ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗೆ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024