ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ,ಬಿಜೆಪಿಯವರು ಯಾವತ್ತಾದರೂ ಒಂದು ಪ್ರಕರಣವಾದರೂ ಸಿಬಿಐಗೆ ಕೊಟ್ಟಿದ್ದಾರಾ? ಎಂದು ಖಾರವಾಗಿ ಪ್ರಶ್ನೆ ಮಾಡಿದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್ ಅವರ ಮೇಲಿನ ಆರೋಪ, ಪರೇಶ್ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು.
ಆದರೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ಎಂದು ಮರು ಪ್ರಶ್ನಿಸಿದರು.
ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ.
ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ?ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment