ಟಿಪ್ಪುವನ್ನು ಮೈಸೂರು ಹುಲಿ ಎಂದು ಹೇಳಲು ಒಂದೇ ಒಂದು ಕಾರಣ ಕೊಡಿ ಎಂದಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಕಿಡಿಕಾರಿದರು,ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ಫೋಟೊಗ್ರಫಿ ಇತ್ತಾ. ಹುಲಿನ ಹೊಡೆಯೊಕೆ ಹೋಗಿರುವುದನ್ನ ಯಾರಾದ್ರು ಫೋಟೊ ತೆಗೆದಿದ್ದಾರಾ, ಹುಚ್ಚು ಮುಂಡೆದು ಪ್ರತಾಪ್ ಸಿಂಹಗೆ ಏನೂ ಗೊತ್ತಿಲ್ಲ , ಟಿಪ್ಪು ಬಗ್ಗೆ 70 ವರ್ಷದಿಂದ ಬರೆದುಕೊಂಡು ಬಂದಿದ್ದಾರೆ, ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಅವರನ್ನು ಹುಲಿಯ ಜೊತೆ ತೋರಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಯಡಿಯೂರಪ್ಪನನ್ನ ಹುಲಿಯಾ ಅಂತೀವಿ, ರಾಜಾಹುಲಿ ಅಂತೀವಿ. ಹಾಗಾದ್ರೆ ಅವರು ಕಾಡಿನಲ್ಲಿದ್ದರಾ? ಒಬ್ಬ ಸಂಸದರಾಗಿ ಏನು ಮಾತನಾಡಬೇಕೆಂಬ ಪ್ರಜ್ಞೆ ಇಲ್ಲ ಎಂದರು.
ಮೈಸೂರು ಕುವೆಂಪು ಅವರ ನಾಡು. ಪುಟ್ಟಪ್ಪನವರ ಬಳಿ ನಾವೆಲ್ಲಾ ಪಾಠ ಕೇಳಿದ್ದೇವೆ. ಪುಟ್ಟಪ್ಪನವರ ಪುಸ್ತಕಗಳನ್ನು ತೆಗೆಯಲು ಹೊರಟಿದ್ದಾರೆ. ನಮ್ಮವ್ವ ಕರ್ನಾಟಕ ಮಾತೆ, ನಮ್ಮ ಅಜ್ಜಿ ಭಾರತ ಮಾತೆ. ಮೊದಲು ಅವ್ವನನ್ನು ನೋಡ್ಲಾ ಅಂದ್ರೆ ಅಜ್ಜಿ ನೋಡಕೆ ಹೊರಟವರೇ ಎಂದು ವ್ಯಂಗ್ಯವಾಡಿದರು.
ಪರಿಷತ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಚ್ಡಿ ದೇವೇಗೌಡರು, ನಾನು, ಎಚ್ಡಿ ಕುಮಾರಸ್ವಾಮಿ ಚರ್ಚೆ ಮಾಡಿ ಟಿಕೆಟ್ ಕೊಟ್ಟಿದ್ದೇವೆ. ನಾನು ಯಾವುದೇ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಬಡಿಸುವ ಸ್ಥಾನದಲ್ಲಿದ್ದೇನೆ. ಪಕ್ಷದ ಅಧ್ಯಕ್ಷನಾಗಿ ಕೊಡುವ ಕೆಲಸವಷ್ಟೇ ನನ್ನದು ಎಂದು ಹೇಳಿದರು.
ಬಿಜೆಪಿ ಸರ್ಕಾರಕ್ಕೆ 9 ತಿಂಗಳಷ್ಟೇ ಆಯಸ್ಸು. 9 ತಿಂಗಳ ಬಳಿಕ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಎಚ್ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂದರು.
ಇದನ್ನು ಓದಿ : ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಅಂತಾ ಪ್ರಶ್ನೆ ಹಾಕಿ!
ಮಳಲಿ ಮಸೀದಿ ಬಗ್ಗೆ ಅಷ್ಟಮಂಗಲ ಪ್ರಶ್ನೆ ವಿಚಾರ ಕುರಿತು ಲೇವಡಿ ಮಾಡಿದ ಸಿಎಂ ಇಬ್ರಾಹಿಂ, ಮೊದಲು ಮುಂದಿನ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಾ ಅಂತ ಪ್ರಶ್ನೆ ಹಾಕಿ. ರಾಜ್ಯದಲ್ಲಿ ಏನಾಗುತ್ತೆ, ಮೋದಿ ಏನಾಗ್ತಾರೆ ಎಂದು ಪ್ರಶ್ನೆ ಹಾಕಿ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು