ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕಾರು ಅಪಘಾತಕ್ಕೀಡಾಗಿ ಗಾಯಗೊಂಡವರಿಗೆ ಸಹಾಯ ಮಾಡಿ ಮಾನವೀಯತೆ ತೋರಿದ ಘಟನೆ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚನ್ನಪಟ್ಟಣ ಸಮೀಪದ ಮುದುಗೆರೆ ಗ್ರಾಮದ ಸಮೀಪ ಕಾರೊಂದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಇದೇ ಮಾರ್ಗದಲ್ಲಿಪ್ರಯಾಣ ಮಾಡುತ್ತಿದ್ದ ಸಂಸದ ಪ್ರತಾಪ್ ಸಿಂಹ ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಒಂದು ಕ್ಷಣ ಈ ಪ್ರತಾಪ್ ಸಿಂಹ ಕಾರ್ ಪಲ್ಟಿ ಆಗಿದೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆಯೂ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿ, ಬೇರೆ ಕಾರು ಪಲ್ಟಿ ಆಗಿದೆ ಎಂದು ವಿವರಣೆ ನೀಡಿದರು,