ಕಾರು ಪಲ್ಟಿ : ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಿದ ಸಂಸದ ಪ್ರತಾಪ್ ಸಿಂಹ

Team Newsnap
1 Min Read

ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕಾರು ಅಪಘಾತಕ್ಕೀಡಾಗಿ ಗಾಯಗೊಂಡವರಿಗೆ ಸಹಾಯ ಮಾಡಿ ಮಾನವೀಯತೆ ತೋರಿದ ಘಟನೆ ನಡೆದಿದೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚನ್ನಪಟ್ಟಣ ಸಮೀಪದ ಮುದುಗೆರೆ ಗ್ರಾಮದ ಸಮೀಪ ಕಾರೊಂದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್​​ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ.

ಇದೇ ಮಾರ್ಗದಲ್ಲಿಪ್ರಯಾಣ ಮಾಡುತ್ತಿದ್ದ ಸಂಸದ ಪ್ರತಾಪ್​ ಸಿಂಹ ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಒಂದು ಕ್ಷಣ ಈ ಪ್ರತಾಪ್​ ಸಿಂಹ ಕಾರ್ ಪಲ್ಟಿ ಆಗಿದೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆಯೂ ಪ್ರತಾಪ್​ ಸಿಂಹ ಸ್ಪಷ್ಟನೆ ನೀಡಿ, ಬೇರೆ ಕಾರು ಪಲ್ಟಿ ಆಗಿದೆ ಎಂದು ವಿವರಣೆ ನೀಡಿದರು,

Share This Article
Leave a comment