Trending

ಪ್ರಥಮ್ ಬೆಂಗಳೂರು ಖಾಲಿ ಮಾಡಿದ!

ಒಳ್ಳೆ ಹುಡುಗ ಪ್ರಥಮ್ ಯಾಕೊ ಏನೋ ರಾತ್ರೊ-ರಾತ್ರಿ ಬೆಂಗಳೂರಿನ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ.

ಹೌದು, ಬೆಂಗಳೂರಲ್ಲಿ ಪ್ರಥಮ್ ವಾಸವಿದ್ದ ಬಾಡಿಗೆ ಮನೆಯನ್ನು ಖಾಲಿ ಮಾಡಿ ಊರಿಗೆ ತೆರಳಿದ್ದಾರೆ ಪ್ರಥಮ್.

ಬೆಂಗಳೂರು ಬಿಟ್ಟು ಹೋಗುತ್ತಿರುವ ಬಗ್ಗೆ ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಿರುವ ಪ್ರಥಮ್, ‘ಮೂರು ವರ್ಷ ವಾಸವಿದ್ದ ಬೆಂಗಳೂರಿನ ಮನೆಯಲ್ಲಿ ಖಾಲಿ ಮಾಡುತ್ತಿದ್ದೇನೆ, ಬೆಂಗಳೂರು ಬಿಟ್ಟು ಹೋಗುವಾಗ ಬೇಸರವಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಬಾಡಿಗೆ ಮನೆ ಖಾಲಿ ಮಾಡುತ್ತಿರುವ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ ಪ್ರಥಮ್.

ನಟ ಭಯಂಕರ ಸಿನಿಮಾದ ಉಳಿಕೆ ಕೆಲಸಗಳು ಕಚೇರಿಯಲ್ಲಿಯೇ ನಡೆಯಲಿವೆ, ನಾನು ಆಗಾಗ್ಗೆ ಮಾತ್ರವೇ ಬೆಂಗಳೂರಿಗೆ ಬಂದು ಹೋಗುತ್ತಿರುತ್ತೇನೆ ಎಂದು ಹೇಳಿದ್ದಾರೆ ಪ್ರಥಮ್. ಒಳ್ಳೆಯ ಹುಡುಗ ಪ್ರಥಮ್ ಶಾಶ್ವತವಾಗಿ ತಮ್ಮ ಊರಿನಲ್ಲಿಯೇ ನೆಲೆಸಲು ನಿರ್ಧರಿಸಿದ್ದಾರೆ.

ಬೆಂಗಳೂರು ತಮಗೆ ಗುರುತು ಕೊಟ್ಟ ಊರು, ಇದನ್ನು ಬಿಟ್ಟು ಹೋಗಲು ಬೇಸರವಾಗುತ್ತಿದೆ ಎಂದಿರುವ ಪ್ರಥಮ್, ‘ಬಿಗ್‌ಬಾಸ್ ಮನೆ ಬಿಟ್ಟು ಬರುವಾಗಲೂ ನನಗೆ ಹೀಗೆಯೇ ಆಗಿತ್ತು’ ಎಂದಿದ್ದಾರೆ. ವ್ಯಕ್ತಿಗಳಿಗಿಂತಲೂ ವಸ್ತುಗಳೊಂದಿಗೆ ನಾನು ಹೆಚ್ಚು ಆತ್ಮೀಯತೆ ಬೆಳೆಸಿಕೊಳ್ಳುತ್ತೇನೆ ಎಂದಿದ್ದಾರೆ ಪ್ರಥಮ್.

ಹೊಸ ಸಿನಿಮಾದ ಕೆಲಸ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಸಂತಸದ ಸುದ್ದಿಯೊಂದಿಗೆ ವಾಪಸ್ ಬರುತ್ತೇನೆ ಎಂದಿದ್ದಾರೆ ಪ್ರಥಮ್. ಸದ್ಯಕ್ಕೆ ಕಚೇರಿ ಇನ್ನೂ ಬೆಂಗಳೂರಿನಲ್ಲಿಯೇ, ಸದ್ಯಕ್ಕೆ ಬಾಡಿಗೆ ಮನೆ ಮಾತ್ರ ಖಾಲಿ ಮಾಡಿದ್ದೇನೆ ಎಂದಿದ್ದಾರೆ ಪ್ರಥಮ್.

ಸ್ವಂತ ಊರಲ್ಲಿ ಕೃಷಿ ಜಮೀನು ಹೊಂದಿರುವ ಪ್ರಥಮ್ ಕೃಷಿಯಲ್ಲೂ ತೊಡಗಿಸಿಕೊಂಡಿದ್ದಾರೆ. ಜೊತೆಗೆ ಕುರಿ ಸಾಕಣೆ, ಹಸು ಸಾಕಣೆ ಸಹ ಮಾಡುತ್ತಾರೆ. ಈ ಹಿಂದೆ ಲಾಕ್‌ಡೌನ್ ಸಮಯದಲ್ಲಿ ಸ್ವಂತ ಊರಲ್ಲಿ ಕುರಿ ಮೇಯಿಸಿ ದಿನಗಳೆದಿದ್ದರು.

ಬಿಗ್‌ಬಾಸ್ ವಿಜೇತ ಪ್ರಥಮ್, ಬಿಗ್‌ಬಾಸ್ ಸ್ಪರ್ಧೆಯಿಂದಾಗಿ ಭಾರಿ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದರು. ಪ್ರಥಮ್ ಅಭಿನಯದ ನಟ ಭಯಂಕರ ಸಿನಿಮಾ ಬಿಡುಗಡೆ ಆಗಬೇಕಿದೆ. ಈ ಹಿಂದೆ ಎಂಎಲ್‌ಎ ಮತ್ತು ದೇವರಂಥಾ ಮನುಷ್ಯ ಸಿನಿಮಾಗಳಲ್ಲಿ ಪ್ರಥಮ್ ನಟಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024