ಭಾರತದ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ನೋಡುವ ವೇಳೆ ಬಾಲಿವುಡ್ ನಟ ಶಾರೂಖ್ ಫೋಟೋವೊಂದು ಸಾಮಾಜಿಕ ಜಾಲ ತಾಣದಲ್ಲಿ ಸಖತ್ ವೈರಲ್ ಆಗುವುದರ ಜೊತೆಗೆ ವಿವಾದನ್ನು ಹುಟ್ಟುಹಾಕಿತ್ತು.
ಲತಾ ಮಂಗೇಶ್ಕರ್ ಅಂತಿಮ ದರ್ಶನ ವೇಳೆ ಶಾರೂಖ್ ಖಾನ್ ಪ್ರಾರ್ಥನೆ ಸಲ್ಲಿಸಿದ ರೀತಿ ಸೋಶಿಯಲ್ ಮೀಡಿಯಾದಲ್ಲಿ ತುಂಬ ಹೈಲೈಟ್ ಆಗಿದೆ.
ಶಾರುಖ್ ಜೊತೆ ನಿಂತಿರುವ ಮಹಿಳೆಯನ್ನು ಗೌರಿ ಖಾನ್ ಎಂದು ನೆಟ್ಟಿಗರು ಭಾವಿಸಿದ್ದಾರೆ. ಆದರೆ ಅದು ಗೌರಿ ಖಾನ್ ಅಲ್ಲ.
ಶಾರೂಖ್ ಖಾನ್ ಅವರು ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರದ ಮುಂದೆ ನಿಂತು ಮುಸ್ಲಿಂ ಧರ್ಮದ ಪದ್ಧತಿಯಂತೆ ಪ್ರಾರ್ಥನೆ (ದುವಾ) ಸಲ್ಲಿಸಿದರು. ಅವರ ಪಕ್ಕದಲ್ಲಿ ಇದ್ದಿದ್ದ ಮ್ಯಾನೇಜರ್ ಪೂಜಾ ದದ್ಲಾನಿ ಹಿಂದೂ ಧರ್ಮದವರಾದ ಅವರು ಹಿಂದೂ ಪದ್ಧತಿಯಂತೆ ಕೈ ಮುಗಿದು ಪ್ರಾರ್ಥಿಸಿದರು.
ಹಿಂದು, ಮುಸ್ಲಿಂ ಭಾವೈಕ್ಯತೆ ಒಂದೇ ಪ್ರೇಮ್ನಲ್ಲಿ ನೋಡಿದ ಅಭಿಮಾನಿಗಳು ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ನೋಡಿದ ಅಭಿಮಾನಿಗಳು ಶಾರೂಖ್ ಅವರ ಪತ್ನಿ ಗೌರಿ ಖಾನ್ ಎಂದು ಭಾವಿಸಿದ್ದರು.
ಲತಾ ಮಂಗೇಶ್ಕರ್ ಅವರ ಮೃತದೇಹದ ಎದುರಿನಲ್ಲಿ ನಿಂತು ಪ್ರಾರ್ಥನೆ ಮಾಡುವಾಗ ಶಾರೂಖ್ ಖಾನ್ ಅವರು ಮಾಸ್ಕ್ ಧರಿಸಿದ್ದರು.
ಗಾಯಕಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥನೆ ಮಾಡಿದರು. ಬಳಿಕ ಮಾಸ್ಕ್ ತೆಗೆದು ಪಾರ್ಥಿವ ಶರೀರದ ಕಡೆಗೆ ಗಾಳಿ ಊದಿದರು. ಮುಸ್ಲಿಂ ಸಮುದಾಯದಲ್ಲಿ ಈ ರೀತಿ ಮಾಡುವ ಪದ್ಧತಿ ಇದೆ. ಆದರೆ ಅವರು ಗಾಳಿ ಊದಿದ್ದನ್ನು ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ. ಲತಾಜೀ ಪಾರ್ಥಿವ ಶರೀರಕ್ಕೆ ಶಾರೂಖ್ ಖಾನ್ ಉಗಿದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.
ಶಾರೂಖ್ ಖಾನ್ ಅನೇಕ ಸಿನಿಮಾಗಳ ಅನೇಕ ಗೀತೆಗಳಿಗೆ ಲತಾ ಮಂಗೇಶ್ಕರ್ ಧ್ವನಿ ಆಗಿದ್ದರು. ಲತಾ ಬಗ್ಗೆ ಬಾಲಿವುಡ್ನ ಎಲ್ಲ ತಾರೆಯರಿಗೂ ಅಪಾರ ಗೌರವ, ಅಭಿಮಾನ. ಆ ಕಾರಣದಿಂದ ಶಾರುಖ್ ಖಾನ್ ಕೂಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
- ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
- ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
- ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ
- ಬಿಪೊರ್ಜೊಯ್ ಚಂಡಮಾರುತ : ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗಲಿದೆ – IMD ಮುನ್ಸೂಚನೆ
- ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
More Stories
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್