ಬೆಂಗಳೂರು: ಎಡಗಾಲಿನ ಮಂಡಿ ನೋವಿನ ಸಮಸ್ಯೆಯಿಂದಾಗಿ ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲು ಮುಂದಾಗಿದ್ದಾರೆ.
ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ವಿವಿಧ ಇಲಾಖೆಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ.
ಇದನ್ನು ಓದಿ –ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೋಟ್ಯಂತರ ಅಕ್ರಮ – ದಾಖಲೆ ಬಿಡುಗಡೆ ಮಾಡಿದ ಕಾನೂನು ವಿದ್ಯಾರ್ಥಿ
ಬಜೆಟ್ ಮಂಡನೆಗೆ ಮುನ್ನ ಅಗತ್ಯ ತಯಾರಿಗಳನ್ನು ಮಾಡಲು ಈ ಸಭೆ ಪ್ರಮುಖವಾಗಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕವನ್ನು ಅಧಿಕೃತವಾಗಿ ನಿರ್ಧಾರ ಮಾಡಲಾಗುವುದು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು