ಪ್ರೀ ವೆಡ್ಡಿಂಗ್ ಫೋಟೋ ಶೂಟ್ ವೇಳೆ ನದಿಯಲ್ಲಿ ಮುಳುಗಿ ವಧು-ವರ ಜಲ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಂಬಿಗ ನಾಪತ್ತೆಯಾಗಿದ್ದಾನೆ.
ಪ್ರೀ ವೆಡ್ಡಿಂಗ್ ಪೋಟೋಶೂಟ್ ವೇಳೆ ಮುಡುಕುತೊರೆಯ ಕಾವೇರಿ ನದಿಯಲ್ಲಿ ತೆಪ್ಪ ಮುಳುಗಿ ಹಸೆಮಣೆ ಏರಬೇಕಿದ್ದ ಶಶಿಕಲಾ (20) ಹಾಗೂ ಚಂದ್ರು (30) ಸೋಮವಾರ ಮೃತಪಟ್ಟಿದ್ದರು.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ಇವರ ವಿವಾಹಕ್ಕೆ ಕಳೆದ ವಾರವಷ್ಟೇ ನಿಶ್ಚಿತಾರ್ಥ ನಂತರ ಪ್ರೀ ವೆಡ್ಡಿಂಗ್ ಶೂಟ್ ಮಾಡಿದ ವೇಳೆ ದುರ್ಘಟನೆ ನಡೆದಿತ್ತು.
ನ. 22 ರಂದು ಇವರ ವಿವಾಹ ಜರುಗಬೇಕಿತ್ತು.
ಫೋಟೊಗ್ರಾಫರ್ ಹಾಗೂ ಇಬ್ಬರು ಸಂಬಂಧಿಕರೊಂದಿಗೆ ಫೋಟೊ ತೆಗೆಸಿಕೊಳ್ಳಲು ಇವರು ಇಲ್ಲಿಗೆ ಬಂದಿದ್ದರು. ಮೀನು ಹಿಡಿಯಲು ಬಳಸುವ ಸಣ್ಣದೊಂದು ತೆಪ್ಪದ ಮೇಲೆ ಕುಳಿತ ಇವರು ಅಂಬಿಗನೊಂದಿಗೆ 10 ಅಡಿ ದೂರಕ್ಕೆ ಹೋಗಿದ್ದಾರೆ. ಅಲ್ಲಿ ಅಕ್ಕಪಕ್ಕ ಕುಳಿತು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡ (ಟೈಟಾನಿಕ್ ಹಗ್ಗ್ ) ರೀತಿಯಲ್ಲಿ ಕ್ಯಾಮೆರಾಗೆ ಫೋಸ್ ನೀಡುತ್ತಿದ್ದ ವೇಳೆ ಒಂದೇ ಕಡೆ ಭಾರ ಹೆಚ್ಚಾಗಿ ತೆಪ್ಪ ಮುಗುಚಿದೆ. ಕೂಡಲೇ ಅಂಬಿಗ ಈಜಿ ದಡ ಸೇರಿದ್ದಾನೆ. ಇವರಿಬ್ಬರೂ ಮುಳುಗಿ ಮೃತಪಟ್ಟಿದ್ದಾರೆ. ಅಂಬಿಗ ನಾಪತ್ತೆಯಾಗಿದ್ದಾನೆಂದು ಪೋಲೀಸ್ ಮೂಲಗಳು ಹೇಳಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಟೋ ಶೂಟ್ಗೆ ತೆಪ್ಪ ನೀಡಿದ ವ್ಯಕ್ತಿ, ಫೋಟೋಗ್ರಾಫರ್ ಸೇರಿದಂತೆ ಆರು ಜನರ ಮೇಲೆ ತಲಕಾಡು ಪೊಲೀಸ್ ಠಾಣೆಯಲ್ಲಿ ಐಸಿಪಿ ಸೆಕ್ಷನ್ ೩೦೪ ಆಡಿ (ನಿರ್ಲಕ್ಷ್ಯದಿಂದ ಮರಣವನ್ನುಂಟು ಮಾಡುವುದು) ಪ್ರಕರಣ ದಾಖಲಾಗಿದೆ.
ಈ ತೆಪ್ಪವನ್ನು ಮೂಗಪ್ಪ ಅವರು ತಮ್ಮ ಸ್ವಂತ ಉಪಯೋಗಕ್ಕೆ ಬಳಕೆ ಮಾಡುತ್ತಿದ್ದರು. ಕಟ್ಟೆಪುರ-ಮುಡುಕುತೊರೆ ನಡುವೆ ಹರಿಯುವ ಕಾವೇರಿ ನದಿಯನ್ನು ದಾಟಲು ಮೂಗಪ್ಪ ತೆಪ್ಪ ಬಳಕೆ ಮಾಡುತ್ತಿದ್ದರು. ಪ್ರೀ ವೆಡ್ಡಿಂಗ್ ಶೂಟ್ಗೆ ತೆಪ್ಪವನ್ನು ನೀಡುವಂತೆ ನವಜೋಡಿ ಹಾಗೂ ಅವರ ಜತೆಗಿದ್ದವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಮೂಗಪ್ಪ ಅವರು ತೆಪ್ಪ ನೀಡಿದ್ದಾರೆ ಎಂದು ವಿವರಿಸಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment