₹50 ಸಾವಿರ ಕೋಟಿ ವೆಚ್ಚದಲ್ಲಿ ಒಟ್ಟು 699 ಕಿ.ಮೀ. ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಉದ್ದೇಶಿತ ಬೆಂಗಳೂರು-ಪುಣೆ ಎಕ್ಸ್ಪ್ರೆಸ್ವೇ ನಿರ್ಮಾಣಕ್ಕೆ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ ವಿವರವಾದ ಯೋಜನಾ ವರದಿ ತಯಾರಿಸುತ್ತಿದೆ.ಭಾರತ್ ಮಾಲಾ ಹಂತ-2ರ ಅಡಿಯಲ್ಲಿ ಎಕ್ಸ್ಪ್ರೆಸ್ವೇ ನಿರ್ಮಿಸಲು ನಿರ್ಧರಿಸಲಾಗಿದೆ.
ಪುಣೆಯ ಕಂಜಾಳೆಯಲ್ಲಿ ಆರಂಭವಾಗಲಿರುವ ಮಾರ್ಗವು ದೊಡ್ಡಬಳ್ಳಾಪುರ ತಾಲ್ಲೂಕಿನ ಮುತುಗದಹಳ್ಳಿಯ ಹೊರ ವರ್ತುಲ ರಸ್ತೆಯಲ್ಲಿ ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ ಈ ಮಾರ್ಗ ಅಥಣಿ ತಾಲ್ಲೂಕಿನ ಬೊಮ್ಮನಾಳ್ನಲ್ಲಿ ಆರಂಭವಾಗಲಿದ್ದು, ಅಥಣಿ, ಜಮಖಂಡಿ, ಬಾಗಲಕೋಟೆ, ಮುಧೋಳ, ಬಾದಾಮಿ, ನರಗುಂದ, ರೋಣ, ಯಲಬುರ್ಗ, ಕೊಪ್ಪಳ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಜಗಳೂರು, ಚಿತ್ರದುರ್ಗ, ಸಿರಾ, ಮಧುಗಿರಿ, ಕೊರಟಗೆರೆ, ತುಮಕೂರು, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೂಲಕ ಹಾದುಹೋಗಲಿದೆ. ಮಹಾರಾಷ್ಟ್ರದಲ್ಲಿ ಪುಣೆ, ಸತಾರ ಮತ್ತು ಸಾಂಗ್ಲಿ ಜಿಲ್ಲೆಗಳ ಮೂಲಕ ಹಾದು ಹೋಗಲಿದೆ.
ಉದ್ದನೆಯ ಮಾರ್ಗ ನಿರ್ಮಾಣ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಆರು ಪಥಗಳ ಈ ಮಾರ್ಗವು ಕರ್ನಾಟಕದಲ್ಲೇ ಅತಿ ಹೆಚ್ಚು ದೂರ (498 ಕಿ.ಮೀ) ಹಾದು ಹೋಗಲಿದೆ. ಇದಕ್ಕಾಗಿ ರಾಜ್ಯದಲ್ಲೇ 5,205 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಿದೆ. ದತ್ತಣ್ಣ, ಅವಿನಾಶ್, ಪತ್ರಕರ್ತ ಎಚ್ ಆರ್ ಶ್ರೀಶಾ ಸೇರಿ 67 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ,ನವೆಂಬರ್ 1ರಂದು ಸಾಧಕರಿಗೆ ಸನ್ಮಾನ
‘ವಾಹನಗಳು 120 ಕಿ.ಮೀ.ವೇಗದಲ್ಲಿ ಚಲಿಸುವಂತೆ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಉದ್ದೇಶಿತ ಹೆದ್ದಾರಿಯಿಂದಾಗಿ ಉಭಯ ನಗರಗಳ ನಡುವಣ ಪ್ರಯಾಣದ ಅವಧಿಯು 6 ಗಂಟೆಗಳಿಗೆ ತಗ್ಗಲಿದೆ. ಸದ್ಯ ಇರುವ ಬೆಂಗಳೂರು-ಪುಣೆ (ಎನ್ಎಚ್-4) ಹೆದ್ದಾರಿಯು ಒಟ್ಟು 783 ಕಿ.ಮೀ ಉದ್ದವಿದ್ದು, ಇದನ್ನು ಕ್ರಮಿಸಲು 14 ರಿಂದ 15 ಗಂಟೆ ಬೇಕಾಗುತ್ತದೆ’ ಎಂದು ಸಚಿವಾಲಯದ ಅಧಿಕಾರಿ ಹೇಳಿದ್ದಾರೆ.
ಬೆಂಗಳೂರಿಗೆ ಭೇಟಿ ನೀಡಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಯೋಜನೆಯ ಸಂಬಂಧ ಲೋಕಸಭಾ ಸದಸ್ಯರು ಹಾಗೂ ಚುನಾಯಿತ ಪ್ರತಿನಿಧಿಗಳ ಜೊತೆ ಚರ್ಚಿಸಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment