ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಾಹಿತಿ ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ.
ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ. ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್ವಲ್ಲಿ ದುಡೇಕುಲ, ಉಮ್ಮತ್ತಾಟ್ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್ ಅಹಮದ್ ಖಾದ್ರಿ, ಎಸ್.ಸುಬ್ಬರಾಮನ್ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಮೂಲಕ ದೇಶದ ಹೂಡಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ ರಾಕೇಶ್ ಜುಂಜುನವಾಲ ಇತ್ತೀಚೆಗೆ ನಿಧನರಾಗಿದ್ದಾರೆ.
ರಾಕೇಶ್ ಜುಂಜುನುವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ರಾಕೇಶ್ ಜುಂಜುನವಾಲ್ ಪರವಾಗಿ ಅವರ ಪತ್ನಿ ರೇಖಾ ಜುಂಜುನವಾಲ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ ಜುಂಜುನವಾಲ ಕುಟುಂಬಸ್ಥರು ಉಪಸ್ಥಿತರಿದ್ದರು.
ವಾಸ್ತುಶಿಲ್ವ ಸಾಧನೆಯಲ್ಲಿ ಗುಜರಾತ್ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೈನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂಎಸ್ ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನೀಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಸಾಧನಗೈದಿರುವ ಕರ್ನಾಟಕದ ಎಸ್ಎಲ್ ಭ್ಯರಪ್ಪ , ಟ್ರೇಡ್ ಹಾಗೂ ಇಂಡಸ್ಟ್ರಿ ವಿಭಾಗದಲ್ಲಿ ಮಹಾರಾಷ್ಟ್ರದ ಕುಮಾರ್ ಮಂಗಲಂ, ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಮಹಾರಾಷ್ಟ್ರದಲ್ಲಿ ದೀಪಕ್ ಧರ್, ಕಲಾ ಕ್ಷೇತ್ರದಲ್ಲಿನ ಸಾಧಕಿ ತಮಿಳುನಾಡಿನ ವಾಣಿ ಜಯರಾಂ ಸೇರಿದಂತೆ ಪ್ರಮುಖ ಗಣ್ಯರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
This website uses cookies.
Leave a Comment