ರಾಷ್ಟ್ರಪತಿ ಚುನಾವಣೆ – ಇಂದು ಬೆಳಿಗ್ಗೆ 11 ರಿಂದ ಮತ ಎಣಿಕೆ – ಮಧ್ಯಾಹ್ನ ಫಲಿತಾಂಶ

Team Newsnap
1 Min Read

ಜುಲೈ 18 ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಪ್ರಕಟಗೊಳ್ಳಲಿದೆ.
ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬಹುತೇಕ ವಿಜಯಶಾಲಿ ಆಗಲಿದ್ದಾರೆ ಎಂಬ ಲೆಕ್ಕಾಚಾರವಿದೆ.

ಇಂದು ಬೆಳಗ್ಗೆ 11 ಗಂಟೆಗೆ ಮತದಾನ ಎಣಿಕೆ ಕಾರ್ಯ ಆರಂಭವಾಗಲಿದೆ.ರಾಷ್ಟ್ರಪತಿ ಹುದ್ದೆಗೆ ಎನ್‍ಡಿಎಯಿಂದ ದ್ರೌಪದಿ ಮುರ್ಮು, ವಿಪಕ್ಷಗಳಿಂದ ಯಶವಂತ್‌ ಸಿನ್ಹಾ ಅವರನ್ನು ಕಣಕ್ಕಿಳಿಸಲಾಗಿತ್ತು.

ಮುರ್ಮು ಅವರಿಗೆ ಎನ್‍ಡಿಎ ಪಕ್ಷಗಳಲ್ಲದೇ, ಬಿಜೆಡಿ, ಟಿಡಿಪಿ, ವೈಎಸ್‍ಆರ್‌ಪಿ, ಜೆಡಿಎಸ್, ಬಿಎಸ್‍ಪಿ, ಅಕಾಲಿದಳ, ಶಿವಸೇನೆ, ಜೆಎಂಎಂ ಬೆಂಬಲ ನೀಡಿವೆ. ಅಲ್ಲದೇ, ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕೆಲ ಸದಸ್ಯರಿಂದ ಅಡ್ಡಮತದಾನ ಕೂಡ ಆಗಿದೆ ಎನ್ನಲಾಗಿದೆ.

ಉಡುಪಿ ಬಳಿ ಆಂಬುಲೆನ್ಸ್​​ ಭೀಕರ ಅಪಘಾತ : ಸ್ಥಳದಲ್ಲೇ ನಾಲ್ವರು ದಾರುಣ ಸಾವು

ಬುಡಕಟ್ಟು ಜನಾಂಗದ ಮಹಿಳೆಯೊರ್ವರನ್ನು ಎನ್‍ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯನ್ನಾಗಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

Share This Article
Leave a comment