ರಾಷ್ಟ್ರೀಯ

ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭ ಜಯ

ಉತ್ತರ ಪ್ರದೇಶದಲ್ಲಿ ಗೆಲುವಿನಿಂದಾಗಿ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಸಾಧ್ಯತೆ ಕಡಿಮೆ

ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್‌ ಸದಸ್ಯರಿಗೆ ಮತ ಇಲ್ಲ.

543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ.

ಎಲ್ಲಾ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ.

ಉತ್ತರ ಪ್ರದೇಶದ 403 ಶಾಸಕರ ವೋಟಿನ ಮೌಲ್ಯ ಒಟ್ಟು 83,824. 80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ. ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ.

ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್‌, ವೈಎಸ್‌ಆರ್‌ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.

Team Newsnap
Leave a Comment
Share
Published by
Team Newsnap

Recent Posts

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More

April 25, 2024