ರಾಜ್ಯದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥೆಯನ್ನೇ ರದ್ದುಗೊಳಿಸುವಂತೆ ಶಾಸಕರಿಂದ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ಜೊತೆ ಶಾಸಕರ ಜತೆ ನಡೆಸಿದ ಸಭೆಯಲ್ಲಿ ಶಾಸಕರು ಇಂತಹ ಪ್ರಸ್ತಾವ ಮಂಡಿಸಿದ್ದಾರೆ.
ಈ ಸಂಬಂಧಿಸಿ ಕಾನೂನು ತಿದ್ದುಪಡಿ ತರುವಂತೆಯೂ ಶಾಸಕರು ಒತ್ತಾಯಿಸಿದ್ದಾರೆಂದು ಹೇಳಲಾಗಿದೆ.
ಮೂರು ಸ್ತರದ ಪಂಚಾಯತ್ ವ್ಯವಸ್ಥೆ ಜಾರಿಯಲ್ಲಿದ್ದರೂ ತಾ.ಪಂ.ಗಳಿಗೆ ಅನುದಾನ, ನಿರ್ದಿಷ್ಟ ಕೆಲಸ ಇಲ್ಲ. ಹೀಗಾಗಿ ಈ ವ್ಯವಸ್ಥೆ ಏಕೆ ಬೇಕು? ಅನಗತ್ಯ ಆರ್ಥಿಕ ಹೊರೆ ತಪ್ಪಿಸುವಂತೆ ಸಭೆಯಲ್ಲಿ ಶಾಸಕರು ಅಭಿಪ್ರಾಯಪಟ್ಟಿದ್ದಾರೆ .
ಕೇಂದ್ರದ ಪಂ. ರಾಜ್ ಕಾಯ್ದೆಯ ಪ್ರಕಾರ, ಗ್ರಾ.ಪಂ. ಮತ್ತು ಜಿ.ಪಂ. ವ್ಯವಸ್ಥೆ ಕಡ್ಡಾಯ. ತಾ.ಪಂ. ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಗಳು ಅಗತ್ಯವಿದ್ದರೆ ಉಳಿಸಿಕೊಳ್ಳಬಹುದು. ಸದ್ಯ ಕೇಂದ್ರದಿಂದ ಬರುವ ಯೋಜನೆಗಳು ನೇರವಾಗಿ ಗ್ರಾ.ಪಂ.ಗೆ ಹೋಗುತ್ತವೆ. ಹೀಗಾಗಿ ಜಿ.ಪಂ.ಗೂ ಕೆಲವು ನಿರ್ದಿಷ್ಟ ಜವಾಬ್ದಾರಿಗಳಿವೆ. ಆದರೆ ತಾ.ಪಂ.ಗಳಿಗಿಲ್ಲ ಎಂಬುದು ಶಾಸಕರ ವಾದವಾಗಿದೆ.
ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ 1993ರಲ್ಲಿ ಸಂವಿಧಾನಕ್ಕೆ 73ನೇ ತಿದ್ದುಪಡಿ ತರಲಾಗಿದೆ. ಅದರಂತರ ಪ್ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬಂದಿದೆ. ಯಾವ ರಾಜ್ಯದ ಜನಸಂಖ್ಯೆ 20 ಲಕ್ಷಕ್ಕಿಂತ ಹೆಚ್ಚಿದೆಯೋ ಆ ರಾಜ್ಯದಲ್ಲಿ ಮೂರು ಹಂತದ ಪಂಚಾಯತ್ ವ್ಯವಸ್ಥೆ ಇರಬೇಕು ಎಂದು ಸಂವಿಧಾನದಲ್ಲಿಯೇ ಸ್ಪಷ್ಟಪಡಿಸಲಾಗಿದೆ.
ಈಗಿರುವ ವ್ಯವಸ್ಥೆಯನ್ನು ಬದಲಾಯಿಸಲು ರಾಜ್ಯ ಸರಕಾರಗಳಿಗೆ ಅಧಿಕಾರವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಬದಲಾಯಿಸಬಹುದು.
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More
This website uses cookies.
Leave a Comment