ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟದಲ್ಲಿ ಸಿಲುಕಿರುವ ಬಡವರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತವಾಗಿ ಮೇ ಮತ್ತು ಜೂನ್ ಎರಡು ತಿಂಗಳ ಆಹಾರ ಧಾನ್ಯಗಳನ್ನು ನೀಡಲು ನಿರ್ಧರಿಸಿದೆ.
ಬಡ , ಕೂಲಿಕಾರ್ಮಿಕ ವರ್ಗದವರಿಗೆ
ಸರ್ಕಾರ ಬಡವರ ಕಲ್ಯಾಣಕ್ಕೆ ಬದ್ದವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು ಆಹಾರ ಧಾನ್ಯವನ್ನು ದೇಶದ ಬಡ ಜನರಿಗೆ ನೀಡಲಾಗುವುದು.
ದೇಶದ 80 ಕೋಟಿ ಫಲಾನುಭವಿಗಳಿಗೆ ಈ ಯೋಜನೆ ತಲುಪಲಿದೆ. ಇದಕ್ಕಾಗಿ ಸರ್ಕಾ 26 ಸಾವಿರ ಕೋಟಿ ರೂ ವ್ಯಯಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕಳೆದ ವರ್ಷ ಕೂಡವಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು