ಪ್ರಧಾನ ಮಂತ್ರಿ ಮೋದಿ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಮಾಡಲಿದ್ದಾರೆ . ಜೂನ್ 20 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಸಂಜೆ 4.55 ಕ್ಕೆ ಮೈಸೂರು ತಲುಪಲಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಯಿಂದ 6.15 ರವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಒಂದು ಕಾಲು ಗಂಟೆಯ ಸಂವಾದ ಮುಗಿಸಿ ಅಲ್ಲಿಂದ ನೇರವಾಗಿ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
ಮಠದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರಾತ್ರಿ 7.30 ಕ್ಕೆ ಸರಿಯಾಗಿ ಆಗಮಿಸಲಿರುವ ಪ್ರಧಾನಿ, 15 ನಿಮಿಷ ಬೆಟ್ಟದಲ್ಲಿ ಇರಲಿದ್ದಾರೆ. ತಾಯಿ ದರ್ಶನ ಮುಗಿಸಿ ರಾಡಿಸನ್ ಹೋಟೆಲ್ ನಲ್ಲಿ ವಾಸ್ತವ್ಯ .
ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 6.30ಕ್ಕೆ ಆರಂಭವಾಗುವ ಯೋಗ 7.45 ಕ್ಕೆ ಮುಕ್ತಾಯವಾಗಲಿದೆ.
ಇದನ್ನು ಓದಿ –ಸೇನೆಗೆ ಪುಂಡರ ಅಗತ್ಯವಿಲ್ಲ, ರೈಲು ಸುಡುವವರು ಸೇನೆಗೆ ಸೂಕ್ತರಲ್ಲ: ಮಾಜಿ ಜನರಲ್ ವಿಪಿ ಮಲೀಕ್
ಕಾರ್ಯಕ್ರಮದ ನಂತರ ಯದುವಂಶದ ಪ್ರಮೋದಾದೇವಿ ಒಡೆಯರ್, ಯದುವೀರ್ ಅವರನ್ನು ಅರಮನೆಯ ಹಿಂಭಾಗದಲ್ಲಿನ ರಾಜವಂಶಸ್ಥರ ಮನೆಯಲ್ಲೆ ಭೇಟಿಯಾಗುವ ಸಾಧ್ಯತೆ ಇದೆ.
ನಂತರ ಅಲ್ಲಿಂದ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಕೇರಳಕ್ಕೆ ತೆರಳಲಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment